AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮನೆ ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ, ಅಪರಿಚಿತರು ಬಂದ್ರೆ ಬಾಗಿಲು ತೆರೀಬೇಡಿ

ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ಲುಧಿಯಾನಾದಲ್ಲಿ ಸರಣಿ ಮನೆಗಳವು ನಡೆದಿದೆ. ಭಾನುವಾರ ತಡರಾತ್ರಿ 6 ಮನೆಗಳಿಗೆ ಕಳ್ಳ(Thief)ರ ಗುಂಪೊಂದು ನುಗ್ಗಿ 10 ಮೊಬೈಲ್​ಗಳು 50 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಕಳ್ಳರು ಮಾದಕ ವಸ್ತುವನ್ನು ಸಿಂಪಡಿಸಿದ್ದರಿಂದ ತಾವು ಪ್ರಜ್ಞೆ ತಪ್ಪಿದ್ದು ಸೋಮವಾರ ಬೆಳಗ್ಗೆ ಎಚ್ಚರಗೊಂಡಿದ್ದೆವು ಎಂದು ಆರೋಪಿಸಿದ್ದಾರೆ. ಆದರೆ ಕಳ್ಳರು ಮನೆಯೊಳಗೆ ನುಗ್ಗಿದ್ಹೇಗೆ ಎಂಬುದು ತಿಳಿದುಬಂದಿಲ್ಲ.

ರಾತ್ರಿ ಮನೆ ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ, ಅಪರಿಚಿತರು ಬಂದ್ರೆ ಬಾಗಿಲು ತೆರೀಬೇಡಿ
ಕಳ್ಳತನImage Credit source: Adobe Stock
ನಯನಾ ರಾಜೀವ್
|

Updated on:Sep 16, 2025 | 8:10 AM

Share

ಲುಧಿಯಾನಾ, ಸೆಪ್ಟೆಂಬರ್ 16: ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ನಿಮ್ಮ ಪ್ರಜ್ಞೆ ತಪ್ಪಿಸಿ ಮನೆಯನ್ನು ದರೋಡೆ ಮಾಡಬಹುದು ಎಚ್ಚರ.  ಲುಧಿಯಾನಾದಲ್ಲಿ ಸರಣಿ ಮನೆಗಳವು ನಡೆದಿದೆ. ಭಾನುವಾರ ತಡರಾತ್ರಿ 6 ಮನೆಗಳಿಗೆ ಕಳ್ಳ(Thief)ರ ಗುಂಪೊಂದು ನುಗ್ಗಿ 10 ಮೊಬೈಲ್​ಗಳು 50 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಕಳ್ಳರು ಮಾದಕ ವಸ್ತುವನ್ನು ಸಿಂಪಡಿಸಿದ್ದರಿಂದ ತಾವು ಪ್ರಜ್ಞೆ ತಪ್ಪಿದ್ದು ಸೋಮವಾರ ಬೆಳಗ್ಗೆ ಎಚ್ಚರಗೊಂಡಿದ್ದೆವು ಎಂದು ಆರೋಪಿಸಿದ್ದಾರೆ. ಆದರೆ ಕಳ್ಳರು ಮನೆಯೊಳಗೆ ನುಗ್ಗಿದ್ಹೇಗೆ ಎಂಬುದು ತಿಳಿದುಬಂದಿಲ್ಲ.

ಅಟಲ್ ನಗರದ ನಿವಾಸಿ ಮತ್ತು ಕಾರ್ಖಾನೆಯ ಕೆಲಸಗಾರ ಸಾಹುಲ್ ಕುಮಾರ್ ಅವರ ಅಕ್ಕಪಕ್ಕದ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಅವರ ಮನೆಯನ್ನು ಪರಿಶೀಲಿಸಿದಾಗ, ಸಾಹುಲ್ ಅವರ ಪ್ಯಾಂಟ್‌ನಲ್ಲಿ ಇರಿಸಿದ್ದ ಮೊಬೈಲ್ ಫೋನ್ ಮತ್ತು ನಗದು ಕಣ್ಮರೆಯಾಗಿರುವುದು ಕಂಡುಬಂದಿದೆ.

ಸಾಹುಲ್ ಮಾತನಾಡಿ, ವಿಪರೀತ ತಲೆ ತಿರುಗಿದಂತಾಗಿತ್ತು, ತಲೆ ಭಾರವಾದಂತಿತ್ತು, ಕಳ್ಳತನದ ಸಮಯದಲ್ಲಿ ಎಲ್ಲರೂ ಪ್ರಜ್ಞೆ ಕಳೆದುಕೊಳ್ಳುವಂತೆ ಮಾಡಲು ಯಾವುದೋ ಮಾದಕದ್ರವ್ಯ ಸಿಂಪಡಿಸಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಇಂದೋರ್: ಕಳ್ಳತನ ಆರೋಪ, ಗುಂಪಿನಿಂದ ಹಲ್ಲೆ, 40 ಮೂಳೆಗಳು ಮುರಿತ, ವ್ಯಕ್ತಿ ಸಾವು

ಹೆಸರು ಹೇಳಲು ಇಚ್ಛಿಸದ ಮತ್ತೊಬ್ಬ ವ್ಯಕ್ತಿ ಇದೇ ರೀತಿಯ ಅನುಭವವನ್ನು ಹಂಚಿಕೊಂಡರು. ನಮ್ಮ ಮನೆಯಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕದ್ದೊಯ್ಯಲಾಯಿತು. ಕುಟುಂಬದ ಎಲ್ಲಾ ಸದಸ್ಯರು ಪ್ರಜ್ಞೆ ತಪ್ಪಿದ್ದರು. ತಡವಾಗಿ ಎಚ್ಚರಗೊಂಡರು. ಹಿಂದೆಂದೂ ಸಂಭವಿಸಿರಲಿಲ್ಲ. ಕಳ್ಳರು ಉದ್ದೇಶಪೂರ್ವಕವಾಗಿ ದರೋಡೆಗಳನ್ನು ನಡೆಸಲು ಮಾದಕ ದ್ರವ್ಯ ನೀಡಿದ್ದಾರೆ ಎನ್ನುವ ಅನುಮಾನ ಬಲವಾಗಿದೆ.

ನಿವಾಸಿಗಳ ಪ್ರಕಾರ, ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಇಬ್ಬರು ವ್ಯಕ್ತಿಗಳು ಕೈಯಲ್ಲಿ ಬಾಟಲಿಯೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ಶಂಕಿತರು ಮನೆಗಳಿಗೆ ಪ್ರವೇಶಿಸಲು ಗಡಿ ಗೋಡೆಗಳನ್ನು ಹತ್ತಿ ಕತ್ತಲೆಯ ಮರೆಯಲ್ಲಿ ನಿಖರವಾಗಿ ಕಳ್ಳತನ ಮಾಡಿದ್ದಾರೆ ಎಂದು ವರದಿಯಾಗಿದೆ.

ಟಿಬ್ಬಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಹರ್‌ಪ್ರೀತ್ ಸಿಂಗ್, ದೂರುಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದೃಢಪಡಿಸಿದರು. ಈ ಪ್ರದೇಶದಲ್ಲಿ ಇಬ್ಬರು ಶಂಕಿತರು ಓಡಾಡುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪಡೆದುಕೊಂಡಿದ್ದೇವೆ. ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ನಮ್ಮ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Tue, 16 September 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ