AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಪ್ಲಾಸ್ಟಿಕ್​ ಡ್ರಮ್​ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್​​ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್​ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್​ಎಚ್​ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ
ಡ್ರಮ್ Image Credit source: India Today
ನಯನಾ ರಾಜೀವ್
|

Updated on: Jun 27, 2025 | 8:12 AM

Share

ಲುಧಿಯಾನಾ, ಜೂನ್ 27: ಪ್ಲಾಸ್ಟಿಕ್​ ಡ್ರಮ್​ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್​​ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್​ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಎಸ್​ಎಚ್​ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ, ಆದರೆ ದೇಹ ಸಂಪೂರ್ಣವಾಗಿ ಕೊಳೆತುಹೋಗಿದೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿನ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಅವರು ಹೇಳಿದರು.

ತನಿಖಾ ಅಧಿಕಾರಿಗಳು ಲುಧಿಯಾನದಲ್ಲಿರುವ 42 ಡ್ರಮ್ ತಯಾರಿಕಾ ಘಟಕಗಳ ಪಟ್ಟಿಯನ್ನು ಸಂಗ್ರಹಿಸಿದ್ದಾರೆ. ಮೃತದೇಹ ಪತ್ತೆಯಾಗಿರುವ ಡ್ರಮ್ ಹೊಸದಾಗಿದ್ದು, ಇದು ಪೂರ್ವಯೋಜಿತ ಕೊಲೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಕೊಲೆಗೆ ಮುನ್ನ ಡ್ರಮ್ ಅನ್ನು ಹೊಸದಾಗಿ ಖರೀದಿಸಲಾಗಿದೆ ಎಂಬ ಅನುಮಾನವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ಇದು ಕ್ಯಾಬ್ ಓಯೋ ಅಲ್ಲ; ವೈರಲ್‌ ಆಯ್ತು ಕ್ಯಾಬ್‌ನ ವಾರ್ನಿಂಗ್‌ ಬೋರ್ಡ್‌
Image
ಈ ಹಳ್ಳಿಯಲ್ಲಿ ಮದುವೆಯಾಗಿ 7 ದಿನಗಳವರೆಗೆ ಬೆತ್ತಲಾಗಿರಬೇಕಂತೆ ಮಹಿಳೆಯರು
Image
ಮಗಳ ವಯಸ್ಸಿನ ಹುಡುಗಿ ಜತೆ ರಸ್ತೆಯಲ್ಲಿ ವ್ಯಕ್ತಿಯ ರೊಮ್ಯಾನ್ಸ್
Image
ರಸ್ತೆಯಲ್ಲಿ ಹೋಗುತ್ತಿರುವಾಗ ಕುಸಿದು ಪ್ರಾಣಬಿಟ್ಟ ಯುವಕ

ಮತ್ತಷ್ಟು ಓದಿ: ಲಕ್ನೋದ ಹೋಟೆಲ್ ರೂಂನಲ್ಲಿ ಉಜ್ಬೇಕಿಸ್ತಾನದ ಮಹಿಳೆಯ ಶವ ಪತ್ತೆ

ಅಪರಾಧ ಸ್ಥಳದ 5 ಕಿಲೋಮೀಟರ್ ವ್ಯಾಪ್ತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸ್ಕ್ಯಾನ್ ಮಾಡಲು ಪ್ರಾರಂಭಿಸಿದ್ದಾರೆ. ನಗರದ ಕ್ಯಾಮೆರಾಗಳು, ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಪೊಲೀಸರು ಮಾರ್ಗವನ್ನು ಟ್ರ್ಯಾಕ್ ಮಾಡುತ್ತಿದ್ದಾರೆ ಮತ್ತು ಹಲವಾರು ಅನುಮಾನಾಸ್ಪದ ವಾಹನ ನೋಂದಣಿ ಸಂಖ್ಯೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹಲವು ಡ್ರಮ್ ಕಂಪನಿಗಳನ್ನು ಪ್ರಶ್ನಿಸಲಾಗುತ್ತಿದೆ. ಅಪರಾಧ ನಡೆದ ಸ್ಥಳದ ಸುತ್ತಮುತ್ತ ಹೆಚ್ಚಿನ ಸಂಖ್ಯೆಯ ವಲಸಿಗರು ವಾಸಿಸುತ್ತಿದ್ದಾರೆ, ಮತ್ತು ನಾವು ಅವರನ್ನೂ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್‌ಎಚ್‌ಒ ಕುಲ್ವಂತ್ ಕೌರ್ ಹೇಳಿದರು.

ಅಂಥದ್ದೇ ಘಟನೆ

ಆನೇಕಲ್: ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬುಧವಾರ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ (Woman Body) ಪತ್ತೆಯಾಗಿದೆ. ಪೊಲೀಸರ ಪ್ರಕಾರ, ವಿಜಯದುರ್ಗಾ ಮಾಲೀಕರ ಸಂಘದ ಕಾಲೋನಿಯ ರೆಡ್ಡಿ ಲ್ಯಾಬ್‌ನ ಗೋಡೆಯ ಬಳಿ 25ರಿಂದ 35 ವರ್ಷ ವಯಸ್ಸಿನ ಮಹಿಳೆಯ ಹೆಣ ಪತ್ತೆಯಾಗಿದೆ. ಈ ಜಾಗದಲ್ಲಿ ಕಡುಗೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ದುರ್ವಾಸನೆ ಬರುತ್ತಿದೆ ಎಂಬುದರ ಬಗ್ಗೆ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೂಟ್‌ಕೇಸ್ ಅನ್ನು ಪರಿಶೀಲಿಸಿದಾಗ, ಕೆಂಪು ಸೂಟ್ ಧರಿಸಿದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ 10ರಿಂದ 12 ದಿನಗಳ ಹಿಂದೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಯಾರೋ ಆಕೆಯನ್ನು ಬೇರೆಡೆ ಕೊಂದು ಇಲ್ಲಿ ಎಸೆದಿರುವಂತೆ ತೋರುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 194ರ ಅಡಿಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂಟ್‌ಕೇಸ್ ಅನ್ನು ಯಾರಾದರೂ ಎಸೆದಿರುವ ದೃಶ್ಯಗಳಿಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು