AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು
ಸಂಗ್ರಹ ಚಿತ್ರ
TV9 Web
| Edited By: |

Updated on: Sep 18, 2022 | 8:57 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ (Lumpy Virus) 126 ಜಾನುವಾರುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದ (Maharashtra) ಒಟ್ಟು 25 ಜಿಲ್ಲೆಗಳಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ. ಲಂಪಿ ಸ್ಕಿನ್ ಡಿಸೀಸ್ (LSD) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ವಾಶಿಮ್‌ನಲ್ಲಿ 1, ಜಲ್ನಾದಲ್ಲಿ 1 ಮತ್ತು ನಾಗ್ಪುರ ಜಿಲ್ಲೆಯಲ್ಲಿ 1 ಸೇರಿದಂತೆ ಒಟ್ಟು 126 ಸೋಂಕಿತ ಜಾನುವಾರುಗಳು ಸಾವನ್ನಪ್ಪಿವೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Langya Virus: ಕೊರೊನಾದಂತೆಯೇ ಚೀನಾದಲ್ಲಿ ‘ಲಾಂಗ್ಯ’ ಎನ್ನುವ ಹೊಸ ವೈರಸ್ ಪತ್ತೆ: 35 ಮಂದಿಗೆ ಸೋಂಕು

ಪಶುಸಂಗೋಪನಾ ಇಲಾಖೆ ಪ್ರಕಾರ, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಡಿಪಿಸಿ ಮೂಲಕ ಜಿಲ್ಲೆಗೆ 1 ಕೋಟಿ ನಿಧಿ ಲಭ್ಯವಾಗಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ 3 ರೂ. ಗೌರವಧನವನ್ನು ನೀಡಲು ಸಹ ಅನುಮತಿಸಲಾಗಿದೆ.

ನೊಣಗಳು, ಸೊಳ್ಳೆಗಳಿಂದ ಈ ಲಂಪಿ ವೈರಸ್ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ ಪಂಚಾಯತ್‌ಗಳಿಗೆ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು