AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು
ಸಂಗ್ರಹ ಚಿತ್ರ
TV9 Web
| Edited By: |

Updated on: Sep 18, 2022 | 8:57 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ (Lumpy Virus) 126 ಜಾನುವಾರುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದ (Maharashtra) ಒಟ್ಟು 25 ಜಿಲ್ಲೆಗಳಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ. ಲಂಪಿ ಸ್ಕಿನ್ ಡಿಸೀಸ್ (LSD) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ವಾಶಿಮ್‌ನಲ್ಲಿ 1, ಜಲ್ನಾದಲ್ಲಿ 1 ಮತ್ತು ನಾಗ್ಪುರ ಜಿಲ್ಲೆಯಲ್ಲಿ 1 ಸೇರಿದಂತೆ ಒಟ್ಟು 126 ಸೋಂಕಿತ ಜಾನುವಾರುಗಳು ಸಾವನ್ನಪ್ಪಿವೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Langya Virus: ಕೊರೊನಾದಂತೆಯೇ ಚೀನಾದಲ್ಲಿ ‘ಲಾಂಗ್ಯ’ ಎನ್ನುವ ಹೊಸ ವೈರಸ್ ಪತ್ತೆ: 35 ಮಂದಿಗೆ ಸೋಂಕು

ಪಶುಸಂಗೋಪನಾ ಇಲಾಖೆ ಪ್ರಕಾರ, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಡಿಪಿಸಿ ಮೂಲಕ ಜಿಲ್ಲೆಗೆ 1 ಕೋಟಿ ನಿಧಿ ಲಭ್ಯವಾಗಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ 3 ರೂ. ಗೌರವಧನವನ್ನು ನೀಡಲು ಸಹ ಅನುಮತಿಸಲಾಗಿದೆ.

ನೊಣಗಳು, ಸೊಳ್ಳೆಗಳಿಂದ ಈ ಲಂಪಿ ವೈರಸ್ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ ಪಂಚಾಯತ್‌ಗಳಿಗೆ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ