AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ.

Lumpy Virus: ಮಹಾರಾಷ್ಟ್ರದಲ್ಲಿ ಹೆಚ್ಚಿದ ಲಂಪಿ ವೈರಸ್ ರೋಗ; 25 ಜಿಲ್ಲೆಗಳಲ್ಲಿ 126 ಹಸುಗಳು ಸಾವು
ಸಂಗ್ರಹ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 18, 2022 | 8:57 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ (Lumpy Virus) 126 ಜಾನುವಾರುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದ (Maharashtra) ಒಟ್ಟು 25 ಜಿಲ್ಲೆಗಳಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ. ಲಂಪಿ ಸ್ಕಿನ್ ಡಿಸೀಸ್ (LSD) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ವಾಶಿಮ್‌ನಲ್ಲಿ 1, ಜಲ್ನಾದಲ್ಲಿ 1 ಮತ್ತು ನಾಗ್ಪುರ ಜಿಲ್ಲೆಯಲ್ಲಿ 1 ಸೇರಿದಂತೆ ಒಟ್ಟು 126 ಸೋಂಕಿತ ಜಾನುವಾರುಗಳು ಸಾವನ್ನಪ್ಪಿವೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಮಹಾರಾಷ್ಟ್ರ ರಾಜ್ಯದಾದ್ಯಂತ ವೇಗವಾಗಿ ಹರಡುತ್ತಿದೆ. ಇದು ದನಗಳ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಪಶುಸಂಗೋಪನಾ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Langya Virus: ಕೊರೊನಾದಂತೆಯೇ ಚೀನಾದಲ್ಲಿ ‘ಲಾಂಗ್ಯ’ ಎನ್ನುವ ಹೊಸ ವೈರಸ್ ಪತ್ತೆ: 35 ಮಂದಿಗೆ ಸೋಂಕು

ಪಶುಸಂಗೋಪನಾ ಇಲಾಖೆ ಪ್ರಕಾರ, ಈ ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಡಿಪಿಸಿ ಮೂಲಕ ಜಿಲ್ಲೆಗೆ 1 ಕೋಟಿ ನಿಧಿ ಲಭ್ಯವಾಗಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ 3 ರೂ. ಗೌರವಧನವನ್ನು ನೀಡಲು ಸಹ ಅನುಮತಿಸಲಾಗಿದೆ.

ನೊಣಗಳು, ಸೊಳ್ಳೆಗಳಿಂದ ಈ ಲಂಪಿ ವೈರಸ್ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ ಪಂಚಾಯತ್‌ಗಳಿಗೆ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ