AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ಪಲ್ನಾಡು ಜಿಲ್ಲೆಯ ಮಾಚೆರ್ಲಾದಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ 35 ವರ್ಷದ ಸರ್ಕಾರಿ ಉದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಲಾಗಿದೆ. ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಆರೋಪಿ ಈ ಕೃತ್ಯ ಎಸಗಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಮಹಿಳಾ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

ವಿಕೃತ ಕಾಮಿಯ ಅಟ್ಟಹಾಸ: 'ನನಗೆ ಎಚ್‌ಐವಿ ಇದೆ' ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 04, 2026 | 10:57 AM

Share

ವಿಜಯವಾಡ, ಏ.4: ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ಒಂದು ಅಮಾನೀಯ ಘಟನೆಯೊಂದು ನಡೆದಿದೆ. 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿ, ಚಿತ್ರ ಹಿಂಸೆ ನೀಡಿದ್ದಾರೆ. ಗುರುವಾರ ಸಂಜೆ ಸಂತ್ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಚೆರ್ಲಾ ಪಟ್ಟಣದಲ್ಲಿ ಸರ್ಕಾರಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆರೋಪಿಗಳು ಬಂದು ಈ ಅಪರಾಧ ಎಸಗಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ಮಧ್ಯಾಹ್ನ 3:30 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದ್ದು, ಆರೋಪಿ ಕುಡಿಯಲು ನೀರು ಕೇಳುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ, ಮಹಿಳೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ ಎಂದು ಮಾಚೆರ್ಲಾ ಪಟ್ಟಣದ ಸಿಐ ವೆಂಕಟ ರಮಣ ಎಂಬುವವರು ತಿಳಿಸಿದ್ದಾರೆ. ಸಂತ್ರಸ್ತೆ ಪ್ರಸ್ತುತ ನರಸರಾವ್‌ಪೇಟ ಏರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಮಹಿಳೆಯ ಮನೆ ಒಳಗೆ ನುಗ್ಗಿದ ನಂತರ, ಆರೋಪಿಯು ಆಕೆಯನ್ನು ಸ್ಕಾರ್ಫ್‌ನಿಂದ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಮಾಡಿ, ಥಳಿಸಿದ್ದಾನೆ. ಈ ವೇಳೆ ಮಹಿಳೆ ತನಗೆ ಎಚ್‌ಐವಿ ಸೋಂಕು ಇದೆ ಎಂದು ಹೇಳಿಕೊಂಡ, ಕೋಪದಿಂದ ಕಬ್ಬಿಣದ ರಾಡ್​​ ಅನ್ನು ಆಕೆಯ ಖಾಸಗಿ ಭಾಗಕ್ಕೆ ತುರುಕಿದ್ದಾನೆ. ನಂತರ ಅಲ್ಲಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 6 ಮಕ್ಕಳು ಸೇರಿ 9 ಮಂದಿ ದಾರುಣ ಸಾವು!

ಸಂತ್ರಸ್ತೆಯ ಜೊತೆ ವಾಸವಾಗಿದ್ದ ಆಕೆಯ ಸೋದರಳಿಯ ಹತ್ತನೇ ತರಗತಿ ಪರೀಕ್ಷೆ ಮುಗಿಸಿ ತನ್ನ ಹೆತ್ತವರ ಮನೆಗೆ ತೆರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕ ಸಂತ್ರಸ್ತೆಯ ಮೊಬೈಲ್ ಫೋನ್‌ಗೆ ಹಲವು ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಏನೋ ಸಮಸ್ಯೆಯಾಗಿದೆ ಎಂದು ತಿಳಿದು ಅವನು ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೆ ಆಕೆಯ ಮನೆಗೆ ಭೇಟಿ ನೀಡಿ ವಿಚಾರಿಸುವಂತೆ ಹೇಳಿದ್ದಾನೆ. ಬಾಲಕ ಮಾತಿನಂತೆ ಸ್ಥಳೀಯರು ಮಹಿಳೆಯ ಮನೆಗೆ ಧಾವಿಸಿ ನೋಡಿದಾಗ ಆಕೆ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ನೋಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಆಕೆಯನ್ನು ಮೊದಲು ಮಾಚೆರ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನರಸರಾವ್‌ಪೇಟ ಏರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ