AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಒಡಿಶಾದ ವಾಸ್ತುಶಿಲ್ಪಿ ಮಧುಬಾಬು; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಣ್ಣನೆ

ಉತ್ಕಲ್ ಗೌರವ್ ಮಧುಸೂದನ್ ದಾಸ್ ಅವರು ಆಧುನಿಕ ಒಡಿಶಾದ ವಾಸ್ತುಶಿಲ್ಪಿ ಮತ್ತು ದೇಶದ ಅಗ್ರಗಣ್ಯ ಆಧುನಿಕ ಚಿಂತಕರಲ್ಲಿ ಒಬ್ಬರು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಆಧುನಿಕ ಒಡಿಶಾದ ವಾಸ್ತುಶಿಲ್ಪಿ ಮಧುಬಾಬು; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಣ್ಣನೆ
ಧರ್ಮೇಂದ್ರ ಪ್ರಧಾನ್
Ganapathi Sharma
|

Updated on: Apr 29, 2023 | 1:20 PM

Share

ಕಟಕ್: ಉತ್ಕಲ್ ಗೌರವ್ ಮಧುಸೂದನ್ ದಾಸ್ (Madhu Babu) ಅವರು ಆಧುನಿಕ ಒಡಿಶಾದ ವಾಸ್ತುಶಿಲ್ಪಿ ಮತ್ತು ದೇಶದ ಅಗ್ರಗಣ್ಯ ಆಧುನಿಕ ಚಿಂತಕರಲ್ಲಿ ಒಬ್ಬರು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ‘ಉತ್ಕಲ್ ಗೌರವ್ ಮಧುಬಾಬು ಜಯಂತಿ ಸಮಿತಿ’ಯು ಶುಕ್ರವಾರ ಕಟಕ್​​ನಲ್ಲಿ 175ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಒಡಿಶಾ ರಾಜ್ಯ ರಚನೆಯಲ್ಲಿ ಮಧುಬಾಬು ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರು (ಮಧು ಬಾಬು) ‘ಉತ್ಕಲ್ ಸಮ್ಮಿಲನಿ’ಯನ್ನು ಸ್ಥಾಪಿಸಿದರು, ಇದು ಒಡಿಶಾದ ಸಾಮಾಜಿಕ ಮತ್ತು ಕೈಗಾರಿಕಾ ಅಭಿವೃದ್ಧಿಯಲ್ಲಿ ಕ್ರಾಂತಿಯನ್ನು ತಂದಿತು. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಶಿಕ್ಷಣ, ಕೈಗಾರಿಕೀಕರಣ, ಗ್ರಾಮೀಣಾಭಿವೃದ್ಧಿ ಮತ್ತು ಕಾರ್ಮಿಕ ಸುಧಾರಣೆಗಳಲ್ಲಿ ಅವರು ಮಹತ್ತರವಾದ ಪಾತ್ರವನ್ನು ವಹಿಸಿದ್ದಾರೆ ಎಂದರು.

ಇದಕ್ಕೂ ಮುನ್ನ ಅವರು, ಮಧುಬಾಬು ಸಾಂಪ್ರದಾಯಿಕತೆಯ ಹೆಮ್ಮೆ, ವೈಭವ ಮತ್ತು ಜ್ವಲಂತ ಸಂಕೇತವಾಗಿದ್ದರು. ಒಡಿಯ ಭಾಷಿಕ ಪ್ರದೇಶಗಳ ಏಕೀಕರಣಕ್ಕೆ ಅವರ ಕೊಡುಗೆ ದೊಡ್ಡದಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದರು.

ಈ ಮಧ್ಯೆ, ಕಟಕ್‌ನ ಸಾಮಾಜಿಕ ಸಂಘಟನೆಗಳು ಮಧು ಬಾಬು ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿ ಸಹಿ ಅಭಿಯಾನವನ್ನು ಪ್ರಾರಂಭಿಸಿವೆ. ಸಾಲೇಪುರ ಬ್ಲಾಕ್‌ನ ಸತ್ಯಭಾಮಪುರದಲ್ಲಿರುವ ಮಧುಬಾಬು ಅವರ ಜನ್ಮಸ್ಥಳವನ್ನು ರಾಷ್ಟ್ರೀಯ ಪಾರಂಪರಿಕ ತಾಣವನ್ನಾಗಿ ಘೋಷಿಸುವಂತೆ ಸಂಘಟನೆಗಳು ಒತ್ತಾಯಿಸಿವೆ.

ರಾಜ್ಯಕ್ಕೆ ಹಾಗೂ ದೇಶಕ್ಕೆ ಅಪಾರ ಕೊಡುಗೆ ನೀಡಿದ ಮಧುಬಾಬು ಅವರಿಗೆ ಸೂಕ್ತ ಗೌರವ ನೀಡಬೇಕಿದೆ. ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ‘ಉತ್ಕಲ್ ಗೌರವ್ ಮಧುಬಾಬು ಜಯಂತಿ ಸಮಿತಿ’ಯ ಪ್ರಕಾಶ್ ಬೆಹ್ರಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಭಿಯಾನದಲ್ಲಿ ಸಂಗ್ರಹಿಸಿದ ಸಹಿಗಳನ್ನು ಪ್ರಧಾನ್ ಅವರ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು