Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ
Image Credit source: Mid Day
Follow us
ನಯನಾ ರಾಜೀವ್
|

Updated on: Jun 29, 2023 | 3:02 PM

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ. 40 ಸಾವಿರ ರೂ. ಆಸೆಗೆ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದರು, ವರನಿಗೆ ಈಗ 27 ವರ್ಷ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೂನ್ 27 ರಂದು ಭೋಪಾಲ್ ಬಳಿಯ ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ 27 ವರ್ಷದ ಯುವಕನೊಂದಿಗೆ 12 ವರ್ಷದ ಬುಡಕಟ್ಟು ಹುಡುಗಿಯ ವಿವಾಹವನ್ನು ತಡೆದು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು 40,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡಿ 20 ಸಾವಿರ ರೂ ಮುಂಗಡವಾಗಿ ಪಡೆದಿದ್ದು , ಉಳಿದ ಮೊತ್ತವನ್ನು ಮದುವೆಯ ನಂತರ ಅವರಿಗೆ ನೀಡುವುದಾಗಿ ತಿಳಿಸಿದ್ದರಂತೆ. ಎಸ್​ಪಿ ಕಿರಣಲತಾ ಕೆರ್ಕೆಟ್ಟಾ ಮಾತನಾಡಿ, ಜೂನ್ 26 ರಂದು ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು, ನಂತರ ನಾವು ಸ್ಥಳಕ್ಕೆ ತಲುಪಿ ನೋಡಿದ್ದೇವೆ.

ಅರಿಶಿಣ ಶಾಸ್ತ್ರ ನಡೆಯುತ್ತಿತ್ತು. ವಿಚಾರಣೆ ನಡೆಸಿದಾಗ ಹುಡುಗಿಗೆ 12 ವರ್ಷ ಮತ್ತು ಆಕೆ ಮದುವೆಯಾಗಲಿರುವ ವ್ಯಕ್ತಿಗೆ 27 ವರ್ಷ ಎಂದು ತಿಳಿದುಬಂದಿದೆ. ಆಕೆಯ ಪೋಷಕರು 40,000 ರೂ ಪಡೆದು, ಮದುವೆಗೆ ಒಪ್ಪಿಗೆ ನೀಡಿದ್ದರು.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳ, ಇದನ್ನು ತಡೆಯಲು ಅಧಿಕಾರಿಗಳಿಂದ ಹೊಸ ತಂತ್ರ

ಮಾನವ ಕಳ್ಳಸಾಗಣೆ, ಬಾಲಾಪರಾಧಿ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಪೋಷಕರು, ವರ ಮತ್ತು ಅವರ ಪೋಷಕರು ಸೇರಿದಂತೆ ಐವರ ವಿರುದ್ಧ ಇದುವರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ, ದಲ್ಲಾಳಿಗಳಾಗಿ ಕೆಲಸ ಮಾಡಿದವರು ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧವೂ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ