Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ
Image Credit source: Mid Day
Follow us
|

Updated on: Jun 29, 2023 | 3:02 PM

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ. 40 ಸಾವಿರ ರೂ. ಆಸೆಗೆ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದರು, ವರನಿಗೆ ಈಗ 27 ವರ್ಷ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೂನ್ 27 ರಂದು ಭೋಪಾಲ್ ಬಳಿಯ ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ 27 ವರ್ಷದ ಯುವಕನೊಂದಿಗೆ 12 ವರ್ಷದ ಬುಡಕಟ್ಟು ಹುಡುಗಿಯ ವಿವಾಹವನ್ನು ತಡೆದು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು 40,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡಿ 20 ಸಾವಿರ ರೂ ಮುಂಗಡವಾಗಿ ಪಡೆದಿದ್ದು , ಉಳಿದ ಮೊತ್ತವನ್ನು ಮದುವೆಯ ನಂತರ ಅವರಿಗೆ ನೀಡುವುದಾಗಿ ತಿಳಿಸಿದ್ದರಂತೆ. ಎಸ್​ಪಿ ಕಿರಣಲತಾ ಕೆರ್ಕೆಟ್ಟಾ ಮಾತನಾಡಿ, ಜೂನ್ 26 ರಂದು ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು, ನಂತರ ನಾವು ಸ್ಥಳಕ್ಕೆ ತಲುಪಿ ನೋಡಿದ್ದೇವೆ.

ಅರಿಶಿಣ ಶಾಸ್ತ್ರ ನಡೆಯುತ್ತಿತ್ತು. ವಿಚಾರಣೆ ನಡೆಸಿದಾಗ ಹುಡುಗಿಗೆ 12 ವರ್ಷ ಮತ್ತು ಆಕೆ ಮದುವೆಯಾಗಲಿರುವ ವ್ಯಕ್ತಿಗೆ 27 ವರ್ಷ ಎಂದು ತಿಳಿದುಬಂದಿದೆ. ಆಕೆಯ ಪೋಷಕರು 40,000 ರೂ ಪಡೆದು, ಮದುವೆಗೆ ಒಪ್ಪಿಗೆ ನೀಡಿದ್ದರು.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳ, ಇದನ್ನು ತಡೆಯಲು ಅಧಿಕಾರಿಗಳಿಂದ ಹೊಸ ತಂತ್ರ

ಮಾನವ ಕಳ್ಳಸಾಗಣೆ, ಬಾಲಾಪರಾಧಿ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಪೋಷಕರು, ವರ ಮತ್ತು ಅವರ ಪೋಷಕರು ಸೇರಿದಂತೆ ಐವರ ವಿರುದ್ಧ ಇದುವರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ, ದಲ್ಲಾಳಿಗಳಾಗಿ ಕೆಲಸ ಮಾಡಿದವರು ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧವೂ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!