AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ.

Madhya Pradesh: ಹಣಕ್ಕಾಗಿ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರು, ಐವರ ಬಂಧನ
Image Credit source: Mid Day
ನಯನಾ ರಾಜೀವ್
|

Updated on: Jun 29, 2023 | 3:02 PM

Share

ಹಣದ ಆಸೆಗೆ 12 ವರ್ಷದ ಮಗಳನ್ನೇ ಮಾರಾಟ ಮಾಡಿದ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ. 40 ಸಾವಿರ ರೂ. ಆಸೆಗೆ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದರು, ವರನಿಗೆ ಈಗ 27 ವರ್ಷ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೂನ್ 27 ರಂದು ಭೋಪಾಲ್ ಬಳಿಯ ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ 27 ವರ್ಷದ ಯುವಕನೊಂದಿಗೆ 12 ವರ್ಷದ ಬುಡಕಟ್ಟು ಹುಡುಗಿಯ ವಿವಾಹವನ್ನು ತಡೆದು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು 40,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡಿ 20 ಸಾವಿರ ರೂ ಮುಂಗಡವಾಗಿ ಪಡೆದಿದ್ದು , ಉಳಿದ ಮೊತ್ತವನ್ನು ಮದುವೆಯ ನಂತರ ಅವರಿಗೆ ನೀಡುವುದಾಗಿ ತಿಳಿಸಿದ್ದರಂತೆ. ಎಸ್​ಪಿ ಕಿರಣಲತಾ ಕೆರ್ಕೆಟ್ಟಾ ಮಾತನಾಡಿ, ಜೂನ್ 26 ರಂದು ಗುನಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಮಗೆ ಮಾಹಿತಿ ಬಂದಿತ್ತು, ನಂತರ ನಾವು ಸ್ಥಳಕ್ಕೆ ತಲುಪಿ ನೋಡಿದ್ದೇವೆ.

ಅರಿಶಿಣ ಶಾಸ್ತ್ರ ನಡೆಯುತ್ತಿತ್ತು. ವಿಚಾರಣೆ ನಡೆಸಿದಾಗ ಹುಡುಗಿಗೆ 12 ವರ್ಷ ಮತ್ತು ಆಕೆ ಮದುವೆಯಾಗಲಿರುವ ವ್ಯಕ್ತಿಗೆ 27 ವರ್ಷ ಎಂದು ತಿಳಿದುಬಂದಿದೆ. ಆಕೆಯ ಪೋಷಕರು 40,000 ರೂ ಪಡೆದು, ಮದುವೆಗೆ ಒಪ್ಪಿಗೆ ನೀಡಿದ್ದರು.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳ, ಇದನ್ನು ತಡೆಯಲು ಅಧಿಕಾರಿಗಳಿಂದ ಹೊಸ ತಂತ್ರ

ಮಾನವ ಕಳ್ಳಸಾಗಣೆ, ಬಾಲಾಪರಾಧಿ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪ್ರಾಪ್ತ ಬಾಲಕಿಯ ಪೋಷಕರು, ವರ ಮತ್ತು ಅವರ ಪೋಷಕರು ಸೇರಿದಂತೆ ಐವರ ವಿರುದ್ಧ ಇದುವರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ, ದಲ್ಲಾಳಿಗಳಾಗಿ ಕೆಲಸ ಮಾಡಿದವರು ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧವೂ  ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ