AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕನನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಬದುಕುಳಿಯಲಿಲ್ಲ.

ಬೇತುಲ್ ಜಿಲ್ಲೆಯಲ್ಲಿ ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಸಾವು
ಬೋರ್​ವೆಲ್​ ಒಳಗೆ ಬಿದ್ದಿದ್ದ ಬಾಲಕ ಸಾವು
TV9 Web
| Edited By: |

Updated on:Dec 10, 2022 | 9:15 AM

Share

ಬೇತುಲ್/ಮಧ್ಯಪ್ರದೇಶ: ಕೊಳವೆಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ (Boy fall into borewell)ನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಅದಾಗಲೇ ಬಾಲಕ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಧ್ಯಪ್ರದೇಶದ (Madhya Pradesh) ಬೇತುಲ್ ಜಿಲ್ಲೆ (Betul district) ಮಾಂಡವಿ​ ಬಳಿ ತನ್ಮಯ್​​ ಸಾಹು ಎಂಬಾತ ಆಟವಾಡುತ್ತಿದ್ದಾಗ ಕೊಳೆವೆಬಾವಿಗೆ ಬಿದ್ದಿದ್ದ. ಕೂಡಲೇ ಬಾಲಕನ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ನಿರಂತರ 80 ಗಂಟೆಗಳ ಕಾಲ ರಕ್ಷಣಾ ಕಾರ್ಯ ನಡೆಸಿ ಬಾಲಕನನ್ನು ಬೋರ್​ವೆಲ್​ನಿಂದ ಮೇಲಕ್ಕೆತ್ತಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಾನಕ್‌ ಚೌಹಾಣ್‌ ಎಂಬುವರು ತಮ್ಮ ಜಮೀನಿನಲ್ಲಿ ಎರಡು ವರ್ಷಗಳ ಹಿಂದೆ ಬೋರ್​ವೆಲ್ ಅನ್ನು ಕೊರೆಸಿದ್ದರು. ಆದರೆ ಈ ಕೊಳೆವೆಬಾವಿ ಬಳಿ ಆಟವಾಡುತ್ತಿದ್ದ ಬಾಲಕ ತನ್ಮಯ್ ಅದರೊಳಗೆ ಬಿದ್ದಿದ್ದಾನೆ. ಕೊರೆದಿದ್ದ ಬೋರ್​ವೆಲ್​ನಲ್ಲಿ ನೀರು ಬಾರದ ಹಿನ್ನೆಲೆ ಅದಕ್ಕೆ ಮುಚ್ಚಳ ಹಾಕಲಾಗಿತ್ತು. ಬಾಲಕ ಮುಚ್ಚಳವನ್ನು ಹೇಗೆ ತೆಗೆದಿದ್ದಾನೆ ಎಂದು ತನಗೆ ಗೊತ್ತಿಲ್ಲ ಎಂದು ನಾನಕ್ ಚೌಹಾಣ್ ಪೊಲೀಸರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಮಳೆ, ಭೂಕುಸಿತ

ತನ್ಮಯ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿವಿಲ್ ಸರ್ಜನ್ ಅಶೋಕ್ ಬಾರಂಗ ಅವರ ಸಮ್ಮುಖದಲ್ಲಿ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಬೋರ್‌ವೆಲ್‌ನಿಂದ ಹೊರತೆಗೆದಾಗ ಮಗನ ಮುಖವನ್ನೂ ತೋರಿಸಲಿಲ್ಲ ಎಂದು ತನ್ಮಯ್ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು.

ಏನಿದು ಘಟನೆ?

ನಾನಕ್ ಎಂಬವರ ಜಮೀನಿನಲ್ಲಿ ಡಿಸೆಂಬರ್ 6ರಂದು ಬಾಲಕ ತನ್ಮಯ್ ಆಟವಾಡುತ್ತಿದ್ದ. ಈ ವೇಳೆ ಅಲ್ಲೇ ಇದ್ದ 55 ಅಡಿ ಆಳದ ಕೊಳವೆಬಾವಿಗೆ ತನ್ಮಯ್ ಬಿದ್ದಿದ್ದಾನೆ. ಕೂಡಲೇ ವಿಪತ್ತು ನಿರ್ವಹಣಾ ಪಡೆ ಅಥವಾ ಎಸ್‌ಡಿಆರ್‌ಎಫ್‌ ತಂಡವನ್ನು ಸ್ಥಳಕ್ಕೆ ಕರೆಸಿ ಬಾಲಕನ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ಸ್ಥಳಕ್ಕೆ ಮಣ್ಣು ಅಗೆಯುವ ಯಂತ್ರಗಳಿಂದ ರಕ್ಷಣಾ ಕಾರ್ಯ ಆರಂಭಿಸಲಾಗುತ್ತು. ಕೊಳವೆಬಾವಿಯೊಳಗಿದ್ದ ಬಾಲಕಿಗೆ ಆಮ್ಲಜನಕ ನೀಡಲು ವ್ಯವಸ್ಥೆ ಮಾಡಲಾಗಿತ್ತು. ನಿರಂತರ 80 ಗಂಟೆಗಳ ಕಾರ್ಯಾಚರಣೆಯ ನಂತರ ಬಾಲಕನ್ನನ್ನು ಕೊಳವೆಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 am, Sat, 10 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು