AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಪಿಕ್ನಿಕ್​ಗೆ ಹೋಗಿದ್ದ ಯುವತಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Sep 12, 2024 | 10:50 AM

Share

ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದರು. ಆ ಸಂದರ್ಭದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನು ಥಳಿಸಿ ಓರ್ವ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿರುವ ಆರ್ಮಿ ವಾರ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಮೇಜರ್ ಶ್ರೇಣಿಯ ಅಧಿಕಾರಿಗಳು ಜಾಮ್ ಗೇಟ್ ಪ್ರದೇಶದಲ್ಲಿ ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಪಿಕ್ನಿಕ್‌ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ.

ಎಂಟರಿಂದ ಹತ್ತು ಜನರು ಪಿಸ್ತೂಲುಗಳು, ಚಾಕು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಹಿಡಿದು ಬಂದಿದ್ದರು, ಅವರ ಕಾರನ್ನು ಸುತ್ತುವರೆದರು. ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ನಾಲ್ಕು ಮಂದಿಗೂ ಥಳಿಸಿದ್ದಾರೆ. ಬಳಿಕ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.

ಮತ್ತಷ್ಟು ಓದಿ: ಬರ್ತ್​ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಬಳಿಕ ಅವರೊಂದಿಗಿದ್ದ ಯುವತಿಯನ್ನು ಒತ್ತೆಯಾಳಾಗಿರಿಸಿಕೊಂಡು 10 ಲಕ್ಷ ರೂ. ಕೊಡುವಂತೆ ಕೇಳಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ನಾಲ್ಕು ಜನರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರ ಪ್ರಕಾರ, ಅಧಿಕಾರಿಗಳ ದೇಹದಲ್ಲಿ ಗಾಯಗಳ ಚಿಹ್ನೆಗಳು ಇವೆ. ದಾಳಿಕೋರರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವೈದ್ಯಕೀಯ ವರದಿ ದೃಢಪಡಿಸಿದೆ.

ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಇಂದೋರ್ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹತ್ತು ತಂಡಗಳನ್ನು ಕೂಡ ರಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ, ಪ್ರಕರಣವನ್ನು ಭೇದಿಸಲು 10 ತಂಡಗಳನ್ನು ರಚಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್