AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ 25 ಲಕ್ಷ ರೂ ಆರೋಗ್ಯ ವಿಮೆ

Madhya Pradesh Congress Manifesto: ಮುಂಬರಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ನಾಗರಿಕರಿಗೆ 25 ಲಕ್ಷ ರೂ ಆರೋಗ್ಯ ವಿಮೆ, ಒಬಿಸಿಗಳಿಗೆ ಶೇ. 27 ಮೀಸಲಾತಿ ಮತ್ತು ಐಪಿಎಲ್ ತಂಡವನ್ನು ರಚಿಸುವುದು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ತನ್ನ 106 ಪುಟಗಳ ಪ್ರಣಾಳಿಕೆಯಲ್ಲಿ 59 ಭರವಸೆಗಳನ್ನು ಪಟ್ಟಿ ಮಾಡಿದ್ದು, ರೈತರು, ಮಹಿಳೆಯರು ಮತ್ತು ಸರ್ಕಾರಿ ನೌಕರರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೆ ಹಲವು ಭರವಸೆಗಳನ್ನು ನೀಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ 25 ಲಕ್ಷ ರೂ ಆರೋಗ್ಯ ವಿಮೆ
ಮಧ್ಯಪ್ರದೇಶ ಕಾಂಗ್ರೆಸ್ ಪ್ರಣಾಳಿಕೆImage Credit source: Jagaran
ನಯನಾ ರಾಜೀವ್
|

Updated on:Oct 17, 2023 | 2:36 PM

Share

ಮುಂಬರಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ(Assembly Election)ಗೆ ಕಾಂಗ್ರೆಸ್(Congress) ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ನಾಗರಿಕರಿಗೆ 25 ಲಕ್ಷ ರೂ ಆರೋಗ್ಯ ವಿಮೆ, ಒಬಿಸಿಗಳಿಗೆ ಶೇ. 27 ಮೀಸಲಾತಿ ಮತ್ತು ಐಪಿಎಲ್ ತಂಡವನ್ನು ರಚಿಸುವುದು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ತನ್ನ 106 ಪುಟಗಳ ಪ್ರಣಾಳಿಕೆಯಲ್ಲಿ 59 ಭರವಸೆಗಳನ್ನು ಪಟ್ಟಿ ಮಾಡಿದ್ದು, ರೈತರು, ಮಹಿಳೆಯರು ಮತ್ತು ಸರ್ಕಾರಿ ನೌಕರರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೆ ಹಲವು ಭರವಸೆಗಳನ್ನು ನೀಡಿದೆ.

ಪಕ್ಷವು ತನ್ನ ಪ್ರಣಾಳಿಕೆಗೆ ವಚನಪತ್ರ ಎಂದು ಹೆಸರಿಟ್ಟಿದೆ, ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ. ರಾಜಸ್ಥಾನ, ಛತ್ತೀಸ್​ಗಢ, ತೆಲಂಗಾಣ, ಮಿಜೋರಾಂನಲ್ಲೂ ಅಂದೇ ಮತಎಣಿಕೆ ನಡೆಯಲಿದೆ.

ಹೆಣ್ಣುಮಕ್ಕಳ ಮದುವೆಗೆ 1 ಲಕ್ಷ ರೂ ನೀಡಲಾಗುತ್ತದೆ, ನಮ್ಮ ಪ್ರಣಾಳಿಕೆಗೆ 9 ಸಾವಿರಕ್ಕೂ ಹೆಚ್ಚು ಸಲಹೆಗಳನ್ನು ಕಳುಹಿಸಿದ್ದಕ್ಕಾಗಿ ಮಧ್ಯಪ್ರದೇಶದ ಜನರಿಗೆ ಧನ್ಯವಾದಗಳು ಎಂದಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣ: ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಯೋಜನೆ ಭರವಸೆ ಸಾಧ್ಯತೆ

ಅನೇಕ ಸಂಘ, ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಿದ್ದೇವೆ, ಅಂಚೆ ಮೂಲಕವೂ ಸಲಹೆಗಳು ಬಂದಿವೆ. ಅವುಗಳ ಆಧಾರದ ಮೇಲೆ ಪ್ರಾಮಿಸರಿ ನೋಟ್ ಸಿದ್ಧಪಡಿಸಿದ್ದೇವೆ, ಸಾಮಾನ್ಯ ಜನರಿಗೆ ಸಂಬಂಧಿಸಿದ 59 ಸಮಸ್ಯೆಗಳನ್ನು ಪ್ರಾಮಿಸರಿ ನೋಟ್​ನಲ್ಲಿ ಸೇರಿಸಲಾಗಿದೆ. ರಾಜ್ಯಕ್ಕೆ ಕಾಂಗ್ರೆಸ್​ ಬಂದರೆ ಸಮೃದ್ಧಿಯೂ ಬರುತ್ತದೆ ಎಂದು ಕಮಲ್​ನಾಥ್ ಹೇಳಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್​​​ನಿಂದ ವಧುವಿಗೆ 10 ಗ್ರಾಂ ಚಿನ್ನ ಭರವಸೆ ತೆಲಂಗಾಣ ಕಾಂಗ್ರೆಸ್  ತನ್ನ ಪ್ರಣಾಳಿಕೆಯಲ್ಲಿ(manifesto) ವಿವಾಹದ ಸಮಯದಲ್ಲಿ ಅರ್ಹ ವಧುಗಳಿಗೆ ಹತ್ತು ಗ್ರಾಂ ಚಿನ್ನ ಮತ್ತು ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನಗದು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್​ ಮಧ್ಯಪ್ರದೇಶ ಜನರಿಗೆ ನೀಡಿದ ಭರವಸೆಗಳು -ಹಳೆಯ ಪಿಂಚಣಿ ಯೋಜನೆ ಅನುಷ್ಠಾನ -100 ಯೂನಿಟ್​ವರೆಗೆ ಉಚಿತ ವಿದ್ಯುತ್ -200 ಯೂನಿಟ್​ವರೆಗೆ ಅರ್ಧದಷ್ಟು ವಿದ್ಯುತ್ ಬಿಲ್ -ಮಹಿಳೆಯರಿಗೆ ಪ್ರತಿ ತಿಂಗಳು 1,500 ರೂ. -ರೈತರ ಸಾಲ ಮನ್ನಾ -ಎಲ್​ಪಿಜಿ ಗ್ಯಾಸ್​ ಸಿಲಿಂಡರ್ 500 ರೂ. -ರೈತರಿಂದ ಗೋಧಿ ಕ್ವಿಂಟಾಲ್​ಗೆ 2,600 ರೂ. ಕೊಟ್ಟು ಖರೀದಿ -ಪ್ರತಿ ಕ್ವಿಂಟಾಲ್​ಗೆ 2,500 ರೂ,ನಂತೆ ಭತ್ತ ಖರೀದಿ -25 ಲಕ್ಷ ರೂ ಆರೋಗ್ಯ ವಿಮೆ -10 ಲಕ್ಷ ರೂ. ಅಪಘಾತ ವಿಮೆ -ಹೆಣ್ಣುಮಕ್ಕಳ ಮದುವೆ 1 ಲಕ್ಷ ರೂ. -ಐಪಿಎಲ್ ಮಧ್ಯಪ್ರದೇಶ ತಂಡ ರಚನೆ -ಗ್ರಾಮ ಮಟ್ಟದಲ್ಲಿ ಒಂದು ಲಕ್ಷ ಹೊಸ ಹುದ್ದೆಗಳನ್ನು ಸೃಷ್ಟಿಸುವ ಭರವಸೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:35 pm, Tue, 17 October 23

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು