AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರ, ಬಿಜೆಪಿ ಮೇಯರ್​​ ವಿರುದ್ಧ ದೂರು

ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೊಬ್ಬಳು ಇಂದೋರ್​ನ ಬಿಜೆಪಿ ಮೇಯರ್ ವಿರುದ್ಧ ದೂರು ದಾಖಲಿಸಿದ್ದಾರೆ. 32 ವರ್ಷ ವಯಸ್ಸಿನ ಮಹಿಳೆ ದ್ವಾರಕಾಪುರಿ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದು, ಶಾನು ಅಲಿಯಾಸ್ ನಿತಿಶ್ ಶರ್ಮಾ ಎಂಬಾತ ತನ್ನ ಮೇಲೆ 2023ರ ಮೇ 10 ರಿಂದ 2024ರ ಏಪ್ರಿಲ್ 16ವರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರ, ಬಿಜೆಪಿ ಮೇಯರ್​​ ವಿರುದ್ಧ ದೂರು
ಶಾನು ಶರ್ಮಾ Image Credit source: Amarujala.com
ನಯನಾ ರಾಜೀವ್
|

Updated on: Jul 25, 2024 | 11:01 AM

Share

ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೊಬ್ಬಳು ಇಂದೋರ್​ನ ಬಿಜೆಪಿ ಮೇಯರ್ ವಿರುದ್ಧ ದೂರು ದಾಖಲಿಸಿದ್ದಾರೆ. 32 ವರ್ಷ ವಯಸ್ಸಿನ ಮಹಿಳೆ ದ್ವಾರಕಾಪುರಿ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದು, ಶಾನು ಅಲಿಯಾಸ್ ನಿತಿಶ್ ಶರ್ಮಾ ಎಂಬಾತ ತನ್ನ ಮೇಲೆ 2023ರ ಮೇ 10 ರಿಂದ 2024ರ ಏಪ್ರಿಲ್ 16ವರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ಬ್ಯಾಂಕ್‌ನಲ್ಲಿ 1 ಲಕ್ಷ ರೂಪಾಯಿ ಸಾಲ ಹೊಂದಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಅದನ್ನು ಮರುಪಾವತಿಸಲು ಕೌನ್ಸಿಲರ್ ಸಾನು ಒಂದು ಲಕ್ಷ ರೂಪಾಯಿ ನೀಡಿದ್ದರು. ಇದಾದ ನಂತರ ಅವರು ನನ್ನ ಗೆಳೆಯನೊಬ್ಬನಿಂದ ಅಂತರ ಕಾಯ್ದುಕೊಳ್ಳುವಂತೆ ಕೇಳಿಕೊಂಡರು. ನಾನು ನಿರಾಕರಿಸಿದಾಗ ಅವರು ಒಂದು ಲಕ್ಷ ರೂಪಾಯಿ ವಾಪಸ್ ಕೇಳಿದ್ದರು.

ಇಂದೋರ್‌ನ ದ್ವಾರಕಾಪುರಿ (82) ವಾರ್ಡ್‌ನ ಬಿಜೆಪಿ ಕೌನ್ಸಿಲರ್ ಶಾನು ಶರ್ಮಾ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ. ಕೊರೊನಾ ಸಮಯದಲ್ಲಿ ಆರ್ಥಿಕವಾಗಿ ತೊಂದರೆ ಅನುಭವಿಸಿದ್ದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಸಹಾಯಕ್ಕಾಗಿ ಕೌನ್ಸಿಲರ್ ಬಳಿ ಹೋಗಿದ್ದರು, ನಂತರ ಸಹಾಯದ ನೆಪದಲ್ಲಿ ದೈಹಿಕ ಸಂಬಂಧ ಬೆಳೆಸಿದ್ದರು. ಶಾನು ಕೂಡ ನನಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದ್ದರು. ನಂತರ ಅವರು ಸಹಾಯಕ್ಕಾಗಿ ನೀಡಿದ ಹಣವನ್ನು ಕೊಡುವಂತೆ ಪೀಡಿಸುತ್ತಿದ್ದರು.

ಮತ್ತಷ್ಟು ಓದಿ: ಲೇಡಿಸ್ ಪಿಜಿಯಲ್ಲಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಕೊಲೆಗಾರನ ಸುಳಿವು ಪತ್ತೆ, ಯಾರು ಗೊತ್ತಾ?

ನನ್ನ ಬಾಯ್‌ಫ್ರೆಂಡ್‌ನಿಂದ ದೂರ ಇರುವಂತೆ ಸಾನು ಒತ್ತಡ ಹಾಕಿದ್ದರು, ಇದಾದ ನಂತರ ಅವರು ನನಗೆ ಕಿರುಕುಳ ನೀಡಲು ಆರಂಭಿಸಿದ್ದರಿಂದ ವಿರುದ್ಧ ದೂರು ದಾಖಲಿಸಬೇಕಾಯಿತು. ಮಂಗಳವಾರ ರಾತ್ರಿಯೇ ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದರು. ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದು ಬಿಜೆಪಿ ಮುಖಂಡರು ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದರು. ಮೊದಲು ಮಹಿಳೆ ಪ್ರಕರಣ ದಾಖಲಿಸಿಕೊಳ್ಳದಂತೆ ಸಮಜಾಯಿಷಿ ನೀಡಿದರು.

ಭಾರತೀಯ ದಂಡಸಂಹಿತೆ ಸೆಕ್ಷನ್ 376, 376 (2) (ಎನ್) ಮತ್ತು 506ರ ಅನ್ವಯ ಎಫ್ಐಆರ್ ದಾಖಲಾಗಿದ್ದು, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಇದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ರಾಜೇಶ್ ದಾಂದೋತಿಯಾ ಮಾಹಿತಿ ನೀಡಿದ್ದಾರೆ.

ಐವತ್ತು ಸಾವಿರ ರೂಪಾಯಿ ಕೊಟ್ಟೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದೆ, ಕೊಡಲು ನನ್ನ ಬಳಿ ಹಣ ಇರಲಿಲ್ಲ. ಒಂದು ದಿನ ಕೌನ್ಸಿಲರ್ ಹಣದ ಬದಲು ತನ್ನ ಜತೆಗೆ ಮಲಗು ಎಂದು ಕೇಳಿದ್ದರು, ವಿದುರ್ ನಗರದ ಮನೆಯೊಂದರಲ್ಲಿ ಅವರೊಂದಿಗಿದ್ದೆ,ಇದಾದ ನಂತರ ಆತನಿಗೆ ದ್ವಾರಕಾಪುರಿಯಲ್ಲಿರುವ ತನ್ನ ಕಚೇರಿಯೊಂದರಲ್ಲಿ ಕೆಲಸ ಕೊಟ್ಟ.

ಅಲ್ಲಿಯೂ ಹಲವು ಬಾರಿ ಸಂಬಂಧ ಹೊಂದಿದ್ದರು. ಬಳಿಕ ಅವರನ್ನು ಕೆಲಸದಿಂದ ವಜಾಗೊಳಿಸಿದ್ದರು. ಸಾನು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು