AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶದ ಗುನಾದಲ್ಲಿ ಯುವತಿಯೊಬ್ಬಳ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಗೆ ಸೇರಿದ ಹಾಗೂ ಅಕ್ರಮವಾಗಿ ಕಟ್ಟಿದ್ದ ಮನೆಯಲ್ಲಿ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ
Follow us
ನಯನಾ ರಾಜೀವ್
|

Updated on:Apr 21, 2024 | 11:49 AM

ಒಂದು ತಿಂಗಳ ಕಾಲ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯ ಮನೆಯನ್ನು ನೆಲಸಮಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಯುವತಿಯ ತಾಯಿಯ ಆಸ್ತಿ ಬಗ್ಗೆ ಕಣ್ಣಿಟ್ಟಿದ್ದ ಆರೋಪಿಯ ಆಕೆಯ ಮಗಳನ್ನು ಮದುವೆಯಾಗುವ ಕನಸು ಕಂಡಿದ್ದ. ಆದರೆ ಅದಕ್ಕೊಪ್ಪದಿದ್ದಾಗ ಆಕೆಯನ್ನು ಅಪಹರಿಸಿ ಒಂದು ತಿಂಗಳು ಕಾಲ ಆಕೆಯ ಮೇಲೆ ಅತ್ಯಾಚಾರವೆಸಗಿ, ಥಳಿಸಿ ಗಾಯಕ್ಕೆ ಖಾರದ ಪುಡಿ ಎರಚಿ, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಬಾಯಿಗೆ ಫೆವಿಕ್ವಿಕ್ ಅಂಟಿಸಿ ಚಿತ್ರಹಿಂಸೆ ನೀಡುತ್ತಿದ್ದ ವ್ಯಕ್ತಿಯ ಮನೆಯ ಈಗ ನೆಲಸಮವಾಗಿದೆ.

ಅಯಾನ್ ಪಠಾಣ್ ಎಂಬಾತ ಪಕ್ಕದಲ್ಲೇ ಮನೆಯಲ್ಲಿದ್ದ 23 ವರ್ಷದ ಯುವತಿ ಮೇಲೆ ಕಣ್ಣಿಟ್ಟಿದ್ದ, ಆಕೆಯನ್ನು ಅಪಹರಿಸಿ ತಿಂಗಳುಕಾಲ ಕಾಲ ಹಿಂಸೆ ನೀಡಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಎನ್ನಲಾಗಿದೆ. ಆಕೆ ಆಸ್ತಿಯನ್ನು ಹಸ್ತಾಂತರಿಸಲು ನಿರಾಕರಿಸಿದಾಗ ಆಕೆಗೆ ಥಳಿಸಲು ಶುರು ಮಾಡಿದ್ದ.

ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ, ಜತೆಗೆ ಫೆವಿಕ್ವಿಕ್ ಅಂಟಿಸಿದ್ದ.ಈತ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ.

ಮತ್ತಷ್ಟು ಓದಿ: ಬೆಲ್ಟ್​, ಪೈಪ್​ನಿಂದ ಯುವತಿಗೆ ಥಳಿಸಿ, ಗಾಯಕ್ಕೆ ಖಾರದ ಪುಡಿ ಎರಚಿ, ಬಾಯಿಗೆ ಫೆವಿಕ್ವಿಕ್​ ಹಾಕಿ ಚಿತ್ರಹಿಂಸೆ

ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ಬಂದ ನಂತರ ಅಯಾನ್‌ನನ್ನು ಬಂಧಿಸಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಸರ್ಕಾರಿ ಜಮೀನಿನಲ್ಲಿ ಅಯಾನ್ ಅವರ ಮನೆ ನಿರ್ಮಿಸಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ನಂತರ ಅದನ್ನು ಕೆಡವಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Sun, 21 April 24

ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ