AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶದ ಗುನಾದಲ್ಲಿ ಯುವತಿಯೊಬ್ಬಳ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಗೆ ಸೇರಿದ ಹಾಗೂ ಅಕ್ರಮವಾಗಿ ಕಟ್ಟಿದ್ದ ಮನೆಯಲ್ಲಿ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ
ನಯನಾ ರಾಜೀವ್
|

Updated on:Apr 21, 2024 | 11:49 AM

Share

ಒಂದು ತಿಂಗಳ ಕಾಲ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯ ಮನೆಯನ್ನು ನೆಲಸಮಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಯುವತಿಯ ತಾಯಿಯ ಆಸ್ತಿ ಬಗ್ಗೆ ಕಣ್ಣಿಟ್ಟಿದ್ದ ಆರೋಪಿಯ ಆಕೆಯ ಮಗಳನ್ನು ಮದುವೆಯಾಗುವ ಕನಸು ಕಂಡಿದ್ದ. ಆದರೆ ಅದಕ್ಕೊಪ್ಪದಿದ್ದಾಗ ಆಕೆಯನ್ನು ಅಪಹರಿಸಿ ಒಂದು ತಿಂಗಳು ಕಾಲ ಆಕೆಯ ಮೇಲೆ ಅತ್ಯಾಚಾರವೆಸಗಿ, ಥಳಿಸಿ ಗಾಯಕ್ಕೆ ಖಾರದ ಪುಡಿ ಎರಚಿ, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಬಾಯಿಗೆ ಫೆವಿಕ್ವಿಕ್ ಅಂಟಿಸಿ ಚಿತ್ರಹಿಂಸೆ ನೀಡುತ್ತಿದ್ದ ವ್ಯಕ್ತಿಯ ಮನೆಯ ಈಗ ನೆಲಸಮವಾಗಿದೆ.

ಅಯಾನ್ ಪಠಾಣ್ ಎಂಬಾತ ಪಕ್ಕದಲ್ಲೇ ಮನೆಯಲ್ಲಿದ್ದ 23 ವರ್ಷದ ಯುವತಿ ಮೇಲೆ ಕಣ್ಣಿಟ್ಟಿದ್ದ, ಆಕೆಯನ್ನು ಅಪಹರಿಸಿ ತಿಂಗಳುಕಾಲ ಕಾಲ ಹಿಂಸೆ ನೀಡಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಎನ್ನಲಾಗಿದೆ. ಆಕೆ ಆಸ್ತಿಯನ್ನು ಹಸ್ತಾಂತರಿಸಲು ನಿರಾಕರಿಸಿದಾಗ ಆಕೆಗೆ ಥಳಿಸಲು ಶುರು ಮಾಡಿದ್ದ.

ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ, ಜತೆಗೆ ಫೆವಿಕ್ವಿಕ್ ಅಂಟಿಸಿದ್ದ.ಈತ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ.

ಮತ್ತಷ್ಟು ಓದಿ: ಬೆಲ್ಟ್​, ಪೈಪ್​ನಿಂದ ಯುವತಿಗೆ ಥಳಿಸಿ, ಗಾಯಕ್ಕೆ ಖಾರದ ಪುಡಿ ಎರಚಿ, ಬಾಯಿಗೆ ಫೆವಿಕ್ವಿಕ್​ ಹಾಕಿ ಚಿತ್ರಹಿಂಸೆ

ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ಬಂದ ನಂತರ ಅಯಾನ್‌ನನ್ನು ಬಂಧಿಸಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಸರ್ಕಾರಿ ಜಮೀನಿನಲ್ಲಿ ಅಯಾನ್ ಅವರ ಮನೆ ನಿರ್ಮಿಸಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ನಂತರ ಅದನ್ನು ಕೆಡವಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Sun, 21 April 24

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್