AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶದ ಗುನಾದಲ್ಲಿ ಯುವತಿಯೊಬ್ಬಳ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಗೆ ಸೇರಿದ ಹಾಗೂ ಅಕ್ರಮವಾಗಿ ಕಟ್ಟಿದ್ದ ಮನೆಯಲ್ಲಿ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ಯುವತಿಯನ್ನು ಥಳಿಸಿ, ಅತ್ಯಾಚಾರವೆಸಗಿ, ಬಾಯಿಗೆ ಫೆವಿಕ್ವಿಕ್​ ಹಾಕಿದ್ದ ಆರೋಪಿಯ ಮನೆ ನೆಲಸಮ
ನಯನಾ ರಾಜೀವ್
|

Updated on:Apr 21, 2024 | 11:49 AM

Share

ಒಂದು ತಿಂಗಳ ಕಾಲ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯ ಮನೆಯನ್ನು ನೆಲಸಮಗೊಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಯುವತಿಯ ತಾಯಿಯ ಆಸ್ತಿ ಬಗ್ಗೆ ಕಣ್ಣಿಟ್ಟಿದ್ದ ಆರೋಪಿಯ ಆಕೆಯ ಮಗಳನ್ನು ಮದುವೆಯಾಗುವ ಕನಸು ಕಂಡಿದ್ದ. ಆದರೆ ಅದಕ್ಕೊಪ್ಪದಿದ್ದಾಗ ಆಕೆಯನ್ನು ಅಪಹರಿಸಿ ಒಂದು ತಿಂಗಳು ಕಾಲ ಆಕೆಯ ಮೇಲೆ ಅತ್ಯಾಚಾರವೆಸಗಿ, ಥಳಿಸಿ ಗಾಯಕ್ಕೆ ಖಾರದ ಪುಡಿ ಎರಚಿ, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಬಾಯಿಗೆ ಫೆವಿಕ್ವಿಕ್ ಅಂಟಿಸಿ ಚಿತ್ರಹಿಂಸೆ ನೀಡುತ್ತಿದ್ದ ವ್ಯಕ್ತಿಯ ಮನೆಯ ಈಗ ನೆಲಸಮವಾಗಿದೆ.

ಅಯಾನ್ ಪಠಾಣ್ ಎಂಬಾತ ಪಕ್ಕದಲ್ಲೇ ಮನೆಯಲ್ಲಿದ್ದ 23 ವರ್ಷದ ಯುವತಿ ಮೇಲೆ ಕಣ್ಣಿಟ್ಟಿದ್ದ, ಆಕೆಯನ್ನು ಅಪಹರಿಸಿ ತಿಂಗಳುಕಾಲ ಕಾಲ ಹಿಂಸೆ ನೀಡಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಎನ್ನಲಾಗಿದೆ. ಆಕೆ ಆಸ್ತಿಯನ್ನು ಹಸ್ತಾಂತರಿಸಲು ನಿರಾಕರಿಸಿದಾಗ ಆಕೆಗೆ ಥಳಿಸಲು ಶುರು ಮಾಡಿದ್ದ.

ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ, ಜತೆಗೆ ಫೆವಿಕ್ವಿಕ್ ಅಂಟಿಸಿದ್ದ.ಈತ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ.

ಮತ್ತಷ್ಟು ಓದಿ: ಬೆಲ್ಟ್​, ಪೈಪ್​ನಿಂದ ಯುವತಿಗೆ ಥಳಿಸಿ, ಗಾಯಕ್ಕೆ ಖಾರದ ಪುಡಿ ಎರಚಿ, ಬಾಯಿಗೆ ಫೆವಿಕ್ವಿಕ್​ ಹಾಕಿ ಚಿತ್ರಹಿಂಸೆ

ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ಬಂದ ನಂತರ ಅಯಾನ್‌ನನ್ನು ಬಂಧಿಸಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಸರ್ಕಾರಿ ಜಮೀನಿನಲ್ಲಿ ಅಯಾನ್ ಅವರ ಮನೆ ನಿರ್ಮಿಸಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ನಂತರ ಅದನ್ನು ಕೆಡವಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Sun, 21 April 24

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ