AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​

ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. 

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್
guruganesh bhat
| Edited By: |

Updated on: Dec 26, 2020 | 1:35 PM

Share

ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ- 2020 ಕ್ಕೆ ಮಧ್ಯ ಪ್ರದೇಶ ಶಿವ್ರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಸಚಿವ ಸಂಪುಟ​ ಒಪ್ಪಿಗೆ ನೀಡಿದೆ.ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರದ ಪ್ರಯತ್ನಕ್ಕೆ ಕನಿಷ್ಠ 50 ಸಾವಿರ ದಂಡ ಮತ್ತು 2 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಬಲವಂತದ ಮತಾಂತರಕ್ಕೆ ಯತ್ನಿಸುವವರಿಗೆ 1 ರಿಂದ 5 ವರ್ಷದವರೆಗೆ ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ದಂಡವನ್ನೂ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಮತಾಂತರವಾಗುವ ಇಚ್ಛೆಯುಳ್ಳವರು ಎರಡು ತಿಂಗಳ‌ ಮೊದಲೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿರಬೇಕು ಎಂಬ ಆಯ್ಕೆಯನ್ನೂ ನೀಡಲಾಗಿದೆ. ಡಿಸೆಂಬರ್ 28 ರಿಂದ ನಡೆಯಲಿರುವ ಮೂರು ದಿನಗಳ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದೆ. ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ, ಈಗ ಅಸ್ತಿತ್ವದಲ್ಲಿರುವ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ -1968 ಕ್ಕೆ ಪರ್ಯಾಯ ಕಾಯ್ದೆಯಾಗಿ ಜಾರಿಗೆ ಬರಲಿದೆ.

ಇನ್ನು, ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. ಉತ್ತರ ಪ್ರದೇಶ ಮತ್ತು ಅರುಣಾಚಲ ಪ್ರದೇಶಗಳ ನಂತರ ಮಧ್ಯ ಪ್ರದೇಶ ‘ಲವ್ ಜಿಹಾದ್’ ವಿರುದ್ಧ ಮಸೂದೆಗೆ ಒಪ್ಪಿಗೆ ನೀಡಿರುವ ಮೂರನೆ ರಾಜ್ಯವಾಗಿದೆ.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್