AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​

ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. 

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಒಪ್ಪಿಗೆ ಸೂಚಿಸಿದ ಮಧ್ಯ ಪ್ರದೇಶ ಸಚಿವ ಸಂಪುಟ ​
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್
guruganesh bhat
| Edited By: |

Updated on: Dec 26, 2020 | 1:35 PM

Share

ಭೋಪಾಲ್: ಧಾರ್ಮಿಕ ಸ್ವಾತಂತ್ರ್ಯ ಮಸೂದೆ- 2020 ಕ್ಕೆ ಮಧ್ಯ ಪ್ರದೇಶ ಶಿವ್ರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಸಚಿವ ಸಂಪುಟ​ ಒಪ್ಪಿಗೆ ನೀಡಿದೆ.ಈ ಮಸೂದೆಯ ಪ್ರಕಾರ ಅಪ್ರಾಪ್ತ ಬಾಲಕಿ ಅಥವಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯ ಬಲವಂತದ ಮತಾಂತರದ ಪ್ರಯತ್ನಕ್ಕೆ ಕನಿಷ್ಠ 50 ಸಾವಿರ ದಂಡ ಮತ್ತು 2 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ, ಬಲವಂತದ ಮತಾಂತರಕ್ಕೆ ಯತ್ನಿಸುವವರಿಗೆ 1 ರಿಂದ 5 ವರ್ಷದವರೆಗೆ ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ದಂಡವನ್ನೂ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಮತಾಂತರವಾಗುವ ಇಚ್ಛೆಯುಳ್ಳವರು ಎರಡು ತಿಂಗಳ‌ ಮೊದಲೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿರಬೇಕು ಎಂಬ ಆಯ್ಕೆಯನ್ನೂ ನೀಡಲಾಗಿದೆ. ಡಿಸೆಂಬರ್ 28 ರಿಂದ ನಡೆಯಲಿರುವ ಮೂರು ದಿನಗಳ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗಲಿದೆ. ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ, ಈಗ ಅಸ್ತಿತ್ವದಲ್ಲಿರುವ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ -1968 ಕ್ಕೆ ಪರ್ಯಾಯ ಕಾಯ್ದೆಯಾಗಿ ಜಾರಿಗೆ ಬರಲಿದೆ.

ಇನ್ನು, ಸಾಮೂಹಿಕವಾಗಿ ಧಾರ್ಮಿಕ ಪರಿವರ್ತನೆಗೆ ಪ್ರಯತ್ನಿಸಿದರೆ 5-10 ವರ್ಷ ಜೈಲು ಹಾಗೂ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಇದೆ. ಉತ್ತರ ಪ್ರದೇಶ ಮತ್ತು ಅರುಣಾಚಲ ಪ್ರದೇಶಗಳ ನಂತರ ಮಧ್ಯ ಪ್ರದೇಶ ‘ಲವ್ ಜಿಹಾದ್’ ವಿರುದ್ಧ ಮಸೂದೆಗೆ ಒಪ್ಪಿಗೆ ನೀಡಿರುವ ಮೂರನೆ ರಾಜ್ಯವಾಗಿದೆ.

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್​ಗೆ ಬಿತ್ತು ಕಡಿವಾಣ.. ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಯೋಗಿ ಸಂಪುಟ ಅಸ್ತು

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು