AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಅರಣ್ಯ ಪ್ರದೇಶ ಬಿಟ್ಟು ಗ್ರಾಮಕ್ಕೆ ನುಗ್ಗಿದ ಚೀತಾ: ಗ್ರಾಮಸ್ಥರಲ್ಲಿ ಆತಂಕ, ವಿಡಿಯೋ ನೋಡಿ

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಿಂದ (ಕೆಎನ್ಪಿ) ಸುಮಾರು 20 ಕಿಮೀ ದೂರದಲ್ಲಿರುವ ಝಾರ್ ಬರೋಡಾ ಗ್ರಾಮದ ಪಕ್ಕದ ಕೃಷಿ ಜಮೀನಿಗೆ ಚೀತಾ ಒಂದು ಭಾನುವಾರ ನುಗ್ಗಿದೆ.

Madhya Pradesh: ಅರಣ್ಯ ಪ್ರದೇಶ ಬಿಟ್ಟು ಗ್ರಾಮಕ್ಕೆ ನುಗ್ಗಿದ ಚೀತಾ: ಗ್ರಾಮಸ್ಥರಲ್ಲಿ ಆತಂಕ, ವಿಡಿಯೋ ನೋಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 02, 2023 | 7:30 PM

Share

ಮಧ್ಯಪ್ರದೇಶ: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಿಂದ (Kuno National Park) ಸುಮಾರು 20 ಕಿಮೀ ದೂರದಲ್ಲಿರುವ ಝಾರ್ ಬರೋಡಾ ಗ್ರಾಮದ ಪಕ್ಕದ ಕೃಷಿ ಜಮೀನಿಗೆ ಚೀತಾ (Cheetah) ಒಂದು ಭಾನುವಾರ ನುಗ್ಗಿದೆ. ಅರಣ್ಯ ಪ್ರದೇಶ ಬಿಟ್ಟು ಚೀತಾ ಗ್ರಾಮಕ್ಕೆ ನುಗ್ಗಿರುವುದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ವಿಚಾರ ತಿಳಿಯುತ್ತಿದಂತೆ ಸ್ಥಳಕ್ಕಾಗಮಿಸಿರುವ ನಿಗಾವಣಾ ತಂಡವು ಒಬಾನ್ ಎಂಬ ಹೆಸರಿನ ಚೀತಾವನ್ನು ಮರಳಿ ಅರಣ್ಯಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಸೆಪ್ಟೆಂಬರ್​ನಲ್ಲಿ  ನಮೀಬಿಯಾದಿಂದ 8 ಚೀತಾಗಳನ್ನು ತರಲಾಗಿತ್ತು. ಆ ಪೈಕಿ ಒಬಾನ್ ಕೂಡ ಒಂದು. ಮಾರ್ಚ್​ 11ರಂದು ಕುನೋ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿತ್ತು ಎಂದು ಶಿಯೋಪುರ್ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ಪಿ.ಕೆ.ವರ್ಮಾ ಹೇಳಿದ್ದಾರೆ.

ಚೀತಾದ ಕೊರಳಿಗೆ ಹಾಕಿರುವ ಸಾಧನದಿಂದ ಬಂದ ಸಂಕೇತಗಳ ಪ್ರಕಾರ, ಚೀತಾ ಶನಿವಾರ ರಾತ್ರಿಯಿಂದ ಗ್ರಾಮದ ಕಡೆಗೆ ನುಗ್ಗಿದ್ದು, ಸ್ಥಳದಲ್ಲಿಯೇ ಭೇಟಿ ಕಾದುಕುಳಿತಿದೆ. ಪೊಲೀಸ್ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಚೀತಾವಿರುವ ಪ್ರದೇಶದಿಂದ ಗ್ರಾಮಸ್ಥರಿಗೆ ನಿರ್ಬಂಧ ವಿಧಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚೀತಾವನ್ನು ಮತ್ತೆ ಉದ್ಯಾನವನ ಪ್ರದೇಶಕ್ಕೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Uttarakhand: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 22 ಮಂದಿಗೆ ಗಂಭೀರ ಗಾಯ

ಸದ್ಯ ಒಬಾನ್​​ನನ್ನು ಮತ್ತೆ ಕಾಡಿಗೆ ಕರೆತರಲು ಸಿಬ್ಬಂದಿ ಕಾರ್ಯಚರಣೆ ನಡೆಸುತ್ತಿರುವಂತಹ ವಿಡಿಯೋ ಒಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. 8 ಚೀತಾಗಳಲ್ಲಿ, 4 ಚೀತಾಗಳನ್ನು ಬೇಟೆಯಾಡುವ ಆವರಣಗಳಿಂದ ಮುಕ್ತ ವ್ಯಾಪ್ತಿಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿತ್ತು. ಚೀತಾ ಸಂತತಿ ಉಳಿವಿಗಾಗಿ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಕೆಎನ್​ಪಿಗೆ ತರಲಾಗಿದೆ.

ಇದನ್ನೂ ಓದಿ: Viral Video: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ

ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವುಗಳನ್ನು ವಿಶೇಷ ಆವರಣಗಳಲ್ಲಿ ಬಿಡುಗಡೆ ಮಾಡಿದ್ದರು. ಸಿಯಾಯಾ ಎಂಬ ಮತ್ತೊಂದು ಹೆಣ್ಣು ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿದ್ದು ಮಾರ್ಚ್ 29 ರಂದು ಮೊದಲ ಬಾರಿಗೆ ತಿಳಿದುಬಂದಿತ್ತು. ಇದಕ್ಕೂ ಮುನ್ನ ಮಾರ್ಚ್ 27 ರಂದು ಸಾಶಾ ಎಂದು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಮೃತಪಟ್ಟಿತ್ತು. ಈ ವರ್ಷದ ಫೆಬ್ರವರಿ 18 ರಂದು ದಕ್ಷಿಣ ಆಫ್ರಿಕಾದಿಂದ 7 ಗಂಡು ಮತ್ತು 5 ಹೆಣ್ಣು ಚೀತಾಗಳನ್ನು ಒಳಗೊಂಡ 12 ಚೀತಾಗಳ ಮತ್ತೊಂದು ಗುಂಪನ್ನು ಭಾರತಕ್ಕೆ ತರಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Sun, 2 April 23

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ