AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಆದಿವಾಸಿ ವ್ಯಕ್ತಿಯ ಪಾದಗಳನ್ನು ತೊಳೆದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಆದಿವಾಸಿ ವ್ಯಕ್ತಿ ದಶ್ಮತ್ ರಾವತ್ ಅವರ ಪಾದಗಳನ್ನು ತೊಳೆದಿದ್ದಾರೆ

Madhya Pradesh: ಆದಿವಾಸಿ ವ್ಯಕ್ತಿಯ ಪಾದಗಳನ್ನು ತೊಳೆದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್Image Credit source: Hindustan Times
ನಯನಾ ರಾಜೀವ್
|

Updated on: Jul 06, 2023 | 11:21 AM

Share

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಆದಿವಾಸಿ ವ್ಯಕ್ತಿ ದಶ್ಮತ್ ರಾವತ್ ಅವರ ಪಾದಗಳನ್ನು ತೊಳೆದಿದ್ದಾರೆ. ಬಿಜೆಪಿಯ ಪ್ರವೇಶ್ ಶುಕ್ಲಾ ಎಂಬುವವರು ಮದ್ಯದ ನಶೆಯಲ್ಲಿ ಆದಿವಾಸಿ ವ್ಯಕ್ತಿ ದಶ್ಮತ್ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಸುದ್ದಿ ಎಲ್ಲೆಡೆ ಹರಡಿತ್ತು. ಪ್ರವೇಶ್​ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇದೀಗ ಆ ಆದಿವಾಸಿ ವ್ಯಕ್ತಿಯನ್ನು ತಮ್ಮ ನಿವಾಸಕ್ಕೆ ಕರೆದಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕುರ್ಚಿಯ ಮೇಲೆ ಕೂರಿಸಿ ಅವರ ಪಾದಗಳನ್ನು ತೊಳೆದಿದ್ದಾರೆ. ಬಿಳಿ ಬಟ್ಟೆಯನ್ನು ಸುತ್ತಿ ಅವರಿಗೆ ಮಾಲಾರ್ಪಣೆ ಮಾಡಿದ್ದಾರೆ.

ಪ್ರವೇಶ್ ಶುಕ್ಲಾ ಮನೆ ಧ್ವಂಸ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೇಶ್ ಶುಕ್ಲಾ ಅವರ ಮನೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕೆಡವಲಾಗಿದೆ. ಮಂಗಳವಾರ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: Madhya Pradesh: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ

ಅಧಿಕಾರಿಗಳು ಬುಲ್ಡೋಜರ್‌ನೊಂದಿಗೆ ಆರೋಪಿಯ ಮನೆಗೆ ಆಗಮಿಸುತ್ತಿದ್ದಂತೆ, ಅವರ ಕುಟುಂಬ ಸದಸ್ಯರು ಆರೋಪಿಯನ್ನು ಬಂಧಿಸಿದ ವೀಡಿಯೊ ಹಳೆಯದು ಎಂದು ಹೇಳಿದರು, ಚುನಾವಣೆ ಹತ್ತಿರವಾಗಿರುವುದರಿಂದ ಅದನ್ನು ಮುನ್ನೆಲೆಗೆ ತರಲಾಗಿದೆ ಎಂದು ಹೇಳಿದ್ದಾರೆ.

ಇದು ರಾಜಕೀಯ ಮತ್ತು ಚುನಾವಣಾ ಕಾರಣಗಳಿಗಾಗಿ ಪ್ರಸಾರ ಮಾಡಲಾದ ಹಳೆಯ ವೀಡಿಯೊ ಎಂದು ಆರೋಪಿಯ ಸಹೋದರಿ ಎಎನ್‌ಐಗೆ ತಿಳಿಸಿದ್ದಾರೆ. ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ