AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್

ಬಿಜೆಪಿ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಮೋಹನ್ ಯಾದವ್ ಅವರ ಹೆಸರು ಘೋಷಿಸುತ್ತಿದ್ದಂತೆ ನಿಯೋಜಿತ ಮುಖ್ಯಮಂತ್ರಿಯ ಹಳೇ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಉಜ್ಜಯಿನಿಯಲ್ಲಿ ಖಡ್ಗ ಝಳಪಿಸಿ ಕೌಶಲ ತೋರಿಸುತ್ತಿರುವ ವಿಡಿಯೊ ಇದಾಗಿದೆ.

ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್
ಮೋಹನ್ ಯಾದವ್
ರಶ್ಮಿ ಕಲ್ಲಕಟ್ಟ
|

Updated on: Dec 12, 2023 | 1:34 PM

Share

ದೆಹಲಿ ಡಿಸೆಂಬರ್ 12: ಬಿಜೆಪಿಯು (BJP) ಮೋಹನ್ ಯಾದವ್ (Mohan Yadav) ಅವರನ್ನು ಮಧ್ಯಪ್ರದೇಶದ (Madhya Pradesh) ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುತ್ತಿದ್ದಂತೆ, ಅವರು ಖಡ್ಗವನ್ನು ಝಳಪಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೊ ಡಿಸೆಂಬರ್ 2019ರದ್ದು. ಬಿಜೆಪಿ ಆಯ್ಕೆ ಮಾಡಿರುವ ನೂತನ ಸಿಎಂನ ಕತ್ತಿ ಕೌಶಲ ನೋಡಿ ಎಂಬ ಬರಹದೊಂದಿಗೆ ಈ ಹಳೇ ವಿಡಿಯೊ ವೈರಲ್ ಆಗಿದೆ.

ವಿಡಿಯೊ ಡಿಸೆಂಬರ್ 2019ರದ್ದು ಎಂದು ವರದಿಯಾಗಿದೆ.ಆದರೆ ಇದು ರಾಜ್ಯದ ಮುಂದಿನ ಮುಖ್ಯಮಂತ್ರಿಯ ಇನ್ನೊಂದು ಭಾಗವನ್ನು ಚಿತ್ರಿಸುವುದರಿಂದ ಅಂತರ್ಜಾಲದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಇದು ಉಜ್ಜಯಿನಿಯಲ್ಲಿ ಅವರು ಪ್ರದರ್ಶಿಸಿದ್ದು ಎಂದು ಹೇಳಲಾಗಿದೆ.

ಯಾದವ್ ಅವರನ್ನು ಹೊಸ ಸಿಎಂ ಎಂದು ಬಿಜೆಪಿ ಘೋಷಿಸಿದ ನಂತರ, ಅವರ ತಂದೆ ಪೂನಂ ಚಂದ್ ಯಾದವ್ ಅವರು ನಿರ್ಧಾರದ ಬಗ್ಗೆ ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಯಾದವ್ ಅವರು ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು . ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕತ್ವವನ್ನು ಅಧಿಕೃತವಾಗಿ ಘೋಷಿಸಿದವರು ಶಿವರಾಜ್ ಸಿಂಗ್ ಚೌಹಾಣ್.

“ನನ್ನ ಮಗ ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಆದರೆ ಇದು ಮಾತೆ ಮತ್ತು ಬಾಬಾ ಮಹಾಕಾಲ್ ಅವರ ಆಶೀರ್ವಾದ” ಎಂದು ಪೂನಂ ಚಂದ್ ಯಾದವ್ ಹೇಳಿದರು. ಯಾದವ್ 2013 ರಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು.

ಇದನ್ನೂ ಓದಿ:  ವಿದ್ಯಾರ್ಥಿ ನಾಯಕನಿಂದ ಮುಖ್ಯಮಂತ್ರಿ ಸ್ಥಾನದವರೆಗೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ರಾಜಕೀಯ ಪಯಣ

2018 ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ, ಅವರು ಮತ್ತೊಮ್ಮೆ ಚುನಾಯಿತರಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾದರು. ಇದಕ್ಕೂ ಮುನ್ನ ಜುಲೈ 2, 2020 ರಂದು ಅವರು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರದಲ್ಲಿ ಸಂಪುಟ ಸಚಿವರಾಗಿದ್ದರು. ಮೋಹನ್ ಯಾದವ್ ನಿಯೋಜಿತ ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರೊಂದಿಗೆ ಡಿಸೆಂಬರ್ 13 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ