AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್

ಬಿಜೆಪಿ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಮೋಹನ್ ಯಾದವ್ ಅವರ ಹೆಸರು ಘೋಷಿಸುತ್ತಿದ್ದಂತೆ ನಿಯೋಜಿತ ಮುಖ್ಯಮಂತ್ರಿಯ ಹಳೇ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಉಜ್ಜಯಿನಿಯಲ್ಲಿ ಖಡ್ಗ ಝಳಪಿಸಿ ಕೌಶಲ ತೋರಿಸುತ್ತಿರುವ ವಿಡಿಯೊ ಇದಾಗಿದೆ.

ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್
ಮೋಹನ್ ಯಾದವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 12, 2023 | 1:34 PM

Share

ದೆಹಲಿ ಡಿಸೆಂಬರ್ 12: ಬಿಜೆಪಿಯು (BJP) ಮೋಹನ್ ಯಾದವ್ (Mohan Yadav) ಅವರನ್ನು ಮಧ್ಯಪ್ರದೇಶದ (Madhya Pradesh) ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುತ್ತಿದ್ದಂತೆ, ಅವರು ಖಡ್ಗವನ್ನು ಝಳಪಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೊ ಡಿಸೆಂಬರ್ 2019ರದ್ದು. ಬಿಜೆಪಿ ಆಯ್ಕೆ ಮಾಡಿರುವ ನೂತನ ಸಿಎಂನ ಕತ್ತಿ ಕೌಶಲ ನೋಡಿ ಎಂಬ ಬರಹದೊಂದಿಗೆ ಈ ಹಳೇ ವಿಡಿಯೊ ವೈರಲ್ ಆಗಿದೆ.

ವಿಡಿಯೊ ಡಿಸೆಂಬರ್ 2019ರದ್ದು ಎಂದು ವರದಿಯಾಗಿದೆ.ಆದರೆ ಇದು ರಾಜ್ಯದ ಮುಂದಿನ ಮುಖ್ಯಮಂತ್ರಿಯ ಇನ್ನೊಂದು ಭಾಗವನ್ನು ಚಿತ್ರಿಸುವುದರಿಂದ ಅಂತರ್ಜಾಲದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಇದು ಉಜ್ಜಯಿನಿಯಲ್ಲಿ ಅವರು ಪ್ರದರ್ಶಿಸಿದ್ದು ಎಂದು ಹೇಳಲಾಗಿದೆ.

ಯಾದವ್ ಅವರನ್ನು ಹೊಸ ಸಿಎಂ ಎಂದು ಬಿಜೆಪಿ ಘೋಷಿಸಿದ ನಂತರ, ಅವರ ತಂದೆ ಪೂನಂ ಚಂದ್ ಯಾದವ್ ಅವರು ನಿರ್ಧಾರದ ಬಗ್ಗೆ ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಯಾದವ್ ಅವರು ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು . ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕತ್ವವನ್ನು ಅಧಿಕೃತವಾಗಿ ಘೋಷಿಸಿದವರು ಶಿವರಾಜ್ ಸಿಂಗ್ ಚೌಹಾಣ್.

“ನನ್ನ ಮಗ ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಆದರೆ ಇದು ಮಾತೆ ಮತ್ತು ಬಾಬಾ ಮಹಾಕಾಲ್ ಅವರ ಆಶೀರ್ವಾದ” ಎಂದು ಪೂನಂ ಚಂದ್ ಯಾದವ್ ಹೇಳಿದರು. ಯಾದವ್ 2013 ರಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದರು.

ಇದನ್ನೂ ಓದಿ:  ವಿದ್ಯಾರ್ಥಿ ನಾಯಕನಿಂದ ಮುಖ್ಯಮಂತ್ರಿ ಸ್ಥಾನದವರೆಗೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ರಾಜಕೀಯ ಪಯಣ

2018 ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ, ಅವರು ಮತ್ತೊಮ್ಮೆ ಚುನಾಯಿತರಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾದರು. ಇದಕ್ಕೂ ಮುನ್ನ ಜುಲೈ 2, 2020 ರಂದು ಅವರು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರದಲ್ಲಿ ಸಂಪುಟ ಸಚಿವರಾಗಿದ್ದರು. ಮೋಹನ್ ಯಾದವ್ ನಿಯೋಜಿತ ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರೊಂದಿಗೆ ಡಿಸೆಂಬರ್ 13 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!