AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನಗೇನಿದೆ ಯೋಗ್ಯತೆ, ನಿನ್ನಿಂದ ಏನು ಮಾಡೋಕಾಗುತ್ತೆ ಎಂದ ಜಿಲ್ಲಾಧಿಕಾರಿ, ಟ್ರಕ್ ಚಾಲಕನ ಉತ್ತರ ಇದಾಗಿತ್ತು

ಹಿಟ್ ಆ್ಯಂಡ್ ರನ್ ಕಾನೂನಿನ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ಮಧ್ಯಪ್ರದೇಶದ ಶಾಜಾಪುರ ಜಿಲ್ಲಾಧಿಕಾರಿ ಮತ್ತು ಟ್ರಕ್ ಚಾಲಕರ ನಡುವಿನ ಸಂಭಾಷಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಶಾಜಾಪುರದಲ್ಲಿ 'ಹಿಟ್  ಆ್ಯಂಡ್​ ರನ್' ಕುರಿತ ಕೇಂದ್ರ ಸರ್ಕಾರದ ಹೊಸ ಕಾನೂನನ್ನು ವಿರೋಧಿಸಿ ಚಾಲಕರ ಸಂಘವು ಪ್ರತಿಭಟನೆ ನಡೆಸಿತು. ಈ ಕುರಿತು ಶಾಜಾಪುರ ಜಿಲ್ಲಾ ಅಧಿಕಾರಿ ಕಿಶೋರ್ ಕನ್ಯಾಲ್ ಪ್ರತಿಭಟನಾ ನಿರತ ಚಾಲಕರೊಂದಿಗೆ ಸಭೆ ನಡೆಸಿದರು. ಸಭೆಯ ವಿಡಿಯೋ ಹೊರಬಿದ್ದಿದೆ.

ನಿನಗೇನಿದೆ ಯೋಗ್ಯತೆ, ನಿನ್ನಿಂದ ಏನು ಮಾಡೋಕಾಗುತ್ತೆ ಎಂದ ಜಿಲ್ಲಾಧಿಕಾರಿ, ಟ್ರಕ್ ಚಾಲಕನ ಉತ್ತರ ಇದಾಗಿತ್ತು
ಜಿಲ್ಲಾಧಿಕಾರಿ
ನಯನಾ ರಾಜೀವ್
|

Updated on: Jan 03, 2024 | 9:48 AM

Share

‘ಹಿಟ್ ಆ್ಯಂಡ್ ರನ್’ ಕಾನೂನಿನ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ಮಧ್ಯಪ್ರದೇಶದ ಶಾಜಾಪುರ ಜಿಲ್ಲಾಧಿಕಾರಿ ಮತ್ತು ಟ್ರಕ್ ಚಾಲಕರ ನಡುವಿನ ಸಂಭಾಷಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮಧ್ಯಪ್ರದೇಶದ ಶಾಜಾಪುರದಲ್ಲಿ ‘ಹಿಟ್  ಆ್ಯಂಡ್​ ರನ್’ ಕುರಿತ ಕೇಂದ್ರ ಸರ್ಕಾರದ ಹೊಸ ಕಾನೂನನ್ನು ವಿರೋಧಿಸಿ ಚಾಲಕರ ಸಂಘವು ಪ್ರತಿಭಟನೆ ನಡೆಸಿತು. ಈ ಕುರಿತು ಶಾಜಾಪುರ ಜಿಲ್ಲಾ ಅಧಿಕಾರಿ ಕಿಶೋರ್ ಕನ್ಯಾಲ್ ಪ್ರತಿಭಟನಾ ನಿರತ ಚಾಲಕರೊಂದಿಗೆ ಸಭೆ ನಡೆಸಿದರು. ಸಭೆಯ ವಿಡಿಯೋ ಹೊರಬಿದ್ದಿದೆ.

ಸಭೆಯಲ್ಲಿ ತಾಳ್ಮೆ ಕಳೆದುಕೊಂಡ ಜಿಲ್ಲಾಧಿಕಾರಿ ಕಿಶೋರ್ ಕನ್ಯಾಲ್ ಟ್ರಕ್ ಚಾಲಕನ ಬಳಿ ನೀನ್ಯಾರು, ನೀನೇನು ಮಾಡೋಕೆ ಸಾಧ್ಯ, ನಿನಗೇನು ಯೋಗ್ಯತೆ ಇದೆ ಗದರಿದ್ದರು. ಅದಕ್ಕೆ ಚಾಲಕ ಮಾತನಾಡಿ, ಹೌದು ಸರ್​ ನನಗೆ ಯಾವುದೇ ಸ್ಥಾನಮಾನ ಇಲ್ಲದಿರುವುದಕ್ಕಾಗಿಯೇ ಹೋರಾಟ ನಡೆಸುತ್ತಿದ್ದೇವೆ  ಎಂದು ಉತ್ತರಿಸಿದ್ದರು.

ಹಿಟ್ ಆ್ಯಂಡ್​ ರನ್’ ಕುರಿತ ಕೇಂದ್ರ ಸರ್ಕಾರದ ನೂತನ ಕಾನೂನನ್ನು ವಿರೋಧಿಸಿ ಚಾಲಕರು ಮುಷ್ಕರ ನಡೆಸುತ್ತಿದ್ದು, ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಷ್ಕರ ನಿರತ ಚಾಲಕರೊಂದಿಗೆ ಸಂವಾದ ನಡೆಸಿದ್ದು, ಜಿಲ್ಲಾಧಿಕಾರಿ ಕಿಶೋರ್ ಕುಮಾರ್ ಕನ್ಯಾಲ್, ಎಸ್.ಪಿ. ಯಶಪಾಲ್ ರಜಪೂತ್ ಉಪಸ್ಥಿತರಿದ್ದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ವ್ಯಕ್ತಿಯೊಂದಿಗೆ ಜಿಲ್ಲಾಧಿಕಾರಿ ಮಾತನ್ನು ಖಂಡಿಸಿದ್ದಾರೆ. ಲಾರಿ ಚಾಲಕರು ತಮ್ಮ ಸಮಸ್ಯೆಗಳನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ಕೇಳಲು ಸಭೆ ಆಯೋಜಿಸಲಾಗಿತ್ತು.ಆದರೆ ಅವರಲ್ಲಿ ಒಬ್ಬರು ಇತರರನ್ನು ಪ್ರಚೋದಿಸಲು ಮತ್ತು ಆಂದೋಲನವನ್ನು ತೀವ್ರಗೊಳಿಸಲು ಪ್ರಯತ್ನಿಸುತ್ತಿದ್ದರು, ನನಗೆ ಬೆದರಿಕೆ ಹಾಕಿದ್ದರು, ನನ್ನ ಮಾತುಗಳು ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ