Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್ ಬರೆದಿದ್ದಾರೆ.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು
ಲಸಿಕೆ ಪಡೆದವರಿಗೆ ಬ್ಯಾಡ್ಜ್​ ಮತ್ತು ಪಡೆಯದವರಿಗೆ ಪೋಸ್ಟರ್
Follow us
TV9 Web
| Updated By: Lakshmi Hegde

Updated on:Jun 09, 2021 | 3:56 PM

ಹೆಚ್ಚೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಮಧ್ಯಪ್ರದೇಶ ಪೊಲೀಸರು ವಿನೂತನ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ. ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ..ನಾನು ಲಸಿಕೆ ಪಡೆದಿದ್ದೇನೆ’ ಎಂದು ಬರೆದುಕೊಂಡಿರುವ ಬ್ಯಾಡ್ಜ್​ ಹಾಕಿ ಗೌರವಿಸುತ್ತಿದ್ದಾರೆ. ಆದರೆ ಇನ್ನೂ ಯಾರೂ ಲಸಿಕೆ ಪಡೆದಿಲ್ಲವೋ, ಅವರ ದೇಹದ ಮೇಲೆ ‘ನನ್ನಿಂದ ದೂರವಿರಿ..ನಾನಿನ್ನೂ ಲಸಿಕೆ ಹಾಕಿಸಿಕೊಂಡಿಲ್ಲ’ ಎಂದು ಬರೆದುಕೊಂಡಿರುವ ಪೋಸ್ಟರ್​ ಅಂಟಿಸುತ್ತಿದ್ದಾರೆ.

ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಪೊಲೀಸರು ಈ ಕ್ರಮ ಅನುಸರಿಸುತ್ತಿದ್ದು, ನಾವು ಕೊರೊನಾ ಲಸಿಕೆಯ ಮಹತ್ವ, ಅದರಿಂದ ಇರುವ ಪ್ರಯೋಜನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹೀಗೆ ಮಾಡುತ್ತಿದ್ದೇವೆ. ಲಸಿಕೆ ಪಡೆದವರು ಹೆಮ್ಮೆಯಿಂದ ನಾವು ಲಸಿಕೆ ಪಡೆದಿದ್ದೇವೆ ಎಂದು ಹೇಳಿಕೊಳ್ಳಬಹುದಾಗಿ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಇನ್ನು ಇದರ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್​ ಬರೆದಿದ್ದಾರೆ.

ಇದಕ್ಕೂ ಮೊದಲು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಿಂದ ವಿಡಿಯೋವೊಂದು ವೈರಲ್​ ಆಗಿತ್ತು. ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ 30-45 ನಿಮಿಷ ಶ್ರೀರಾಮನಾಮ ಬರೆಯುವ ಶಿಕ್ಷೆಯನ್ನು ನೀಡುತ್ತಿದ್ದ ಪೊಲೀಸ್ ಅಧಿಕಾರಿಯ ವಿಡಿಯೋ ಅದಾಗಿತ್ತು. ಇದೀಗ ಮತ್ತೊಮ್ಮೆ ಮಧ್ಯಪ್ರದೇಶ ಪೊಲೀಸರು ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

Madhya Pradesh cops honouring those who have received the Covid vaccine

Published On - 3:50 pm, Wed, 9 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ