AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್ ಬರೆದಿದ್ದಾರೆ.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು
ಲಸಿಕೆ ಪಡೆದವರಿಗೆ ಬ್ಯಾಡ್ಜ್​ ಮತ್ತು ಪಡೆಯದವರಿಗೆ ಪೋಸ್ಟರ್
TV9 Web
| Updated By: Lakshmi Hegde|

Updated on:Jun 09, 2021 | 3:56 PM

Share

ಹೆಚ್ಚೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಮಧ್ಯಪ್ರದೇಶ ಪೊಲೀಸರು ವಿನೂತನ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ. ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ..ನಾನು ಲಸಿಕೆ ಪಡೆದಿದ್ದೇನೆ’ ಎಂದು ಬರೆದುಕೊಂಡಿರುವ ಬ್ಯಾಡ್ಜ್​ ಹಾಕಿ ಗೌರವಿಸುತ್ತಿದ್ದಾರೆ. ಆದರೆ ಇನ್ನೂ ಯಾರೂ ಲಸಿಕೆ ಪಡೆದಿಲ್ಲವೋ, ಅವರ ದೇಹದ ಮೇಲೆ ‘ನನ್ನಿಂದ ದೂರವಿರಿ..ನಾನಿನ್ನೂ ಲಸಿಕೆ ಹಾಕಿಸಿಕೊಂಡಿಲ್ಲ’ ಎಂದು ಬರೆದುಕೊಂಡಿರುವ ಪೋಸ್ಟರ್​ ಅಂಟಿಸುತ್ತಿದ್ದಾರೆ.

ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಪೊಲೀಸರು ಈ ಕ್ರಮ ಅನುಸರಿಸುತ್ತಿದ್ದು, ನಾವು ಕೊರೊನಾ ಲಸಿಕೆಯ ಮಹತ್ವ, ಅದರಿಂದ ಇರುವ ಪ್ರಯೋಜನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹೀಗೆ ಮಾಡುತ್ತಿದ್ದೇವೆ. ಲಸಿಕೆ ಪಡೆದವರು ಹೆಮ್ಮೆಯಿಂದ ನಾವು ಲಸಿಕೆ ಪಡೆದಿದ್ದೇವೆ ಎಂದು ಹೇಳಿಕೊಳ್ಳಬಹುದಾಗಿ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಇನ್ನು ಇದರ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್​ ಬರೆದಿದ್ದಾರೆ.

ಇದಕ್ಕೂ ಮೊದಲು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಿಂದ ವಿಡಿಯೋವೊಂದು ವೈರಲ್​ ಆಗಿತ್ತು. ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ 30-45 ನಿಮಿಷ ಶ್ರೀರಾಮನಾಮ ಬರೆಯುವ ಶಿಕ್ಷೆಯನ್ನು ನೀಡುತ್ತಿದ್ದ ಪೊಲೀಸ್ ಅಧಿಕಾರಿಯ ವಿಡಿಯೋ ಅದಾಗಿತ್ತು. ಇದೀಗ ಮತ್ತೊಮ್ಮೆ ಮಧ್ಯಪ್ರದೇಶ ಪೊಲೀಸರು ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

Madhya Pradesh cops honouring those who have received the Covid vaccine

Published On - 3:50 pm, Wed, 9 June 21

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್