AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್ ಬರೆದಿದ್ದಾರೆ.

ಕೊವಿಡ್ 19 ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ’ ಎಂಬ ಬ್ಯಾಡ್ಜ್​ ನೀಡಿ ಗೌರವಿಸುತ್ತಿರುವ ಮಧ್ಯಪ್ರದೇಶ ಪೊಲೀಸರು
ಲಸಿಕೆ ಪಡೆದವರಿಗೆ ಬ್ಯಾಡ್ಜ್​ ಮತ್ತು ಪಡೆಯದವರಿಗೆ ಪೋಸ್ಟರ್
TV9 Web
| Edited By: |

Updated on:Jun 09, 2021 | 3:56 PM

Share

ಹೆಚ್ಚೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಮಧ್ಯಪ್ರದೇಶ ಪೊಲೀಸರು ವಿನೂತನ ಕಾರ್ಯಕ್ರಮವನ್ನು ಶುರು ಮಾಡಿದ್ದಾರೆ. ಲಸಿಕೆ ಪಡೆದವರಿಗೆ ‘ನಾನು ದೇಶಭಕ್ತ..ನಾನು ಲಸಿಕೆ ಪಡೆದಿದ್ದೇನೆ’ ಎಂದು ಬರೆದುಕೊಂಡಿರುವ ಬ್ಯಾಡ್ಜ್​ ಹಾಕಿ ಗೌರವಿಸುತ್ತಿದ್ದಾರೆ. ಆದರೆ ಇನ್ನೂ ಯಾರೂ ಲಸಿಕೆ ಪಡೆದಿಲ್ಲವೋ, ಅವರ ದೇಹದ ಮೇಲೆ ‘ನನ್ನಿಂದ ದೂರವಿರಿ..ನಾನಿನ್ನೂ ಲಸಿಕೆ ಹಾಕಿಸಿಕೊಂಡಿಲ್ಲ’ ಎಂದು ಬರೆದುಕೊಂಡಿರುವ ಪೋಸ್ಟರ್​ ಅಂಟಿಸುತ್ತಿದ್ದಾರೆ.

ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಪೊಲೀಸರು ಈ ಕ್ರಮ ಅನುಸರಿಸುತ್ತಿದ್ದು, ನಾವು ಕೊರೊನಾ ಲಸಿಕೆಯ ಮಹತ್ವ, ಅದರಿಂದ ಇರುವ ಪ್ರಯೋಜನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹೀಗೆ ಮಾಡುತ್ತಿದ್ದೇವೆ. ಲಸಿಕೆ ಪಡೆದವರು ಹೆಮ್ಮೆಯಿಂದ ನಾವು ಲಸಿಕೆ ಪಡೆದಿದ್ದೇವೆ ಎಂದು ಹೇಳಿಕೊಳ್ಳಬಹುದಾಗಿ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಇನ್ನು ಇದರ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ. ಅದನ್ನು ನೋಡಿದ ಹಲವರು, ನಾವು ಲಸಿಕೆ ಹಾಕಿಸಿಕೊಳ್ಳಬೇಕೆಂದು ಕಾಯುತ್ತಿದ್ದೇವೆ. ಆದರೆ ಲಸಿಕೆ ಕೊರತೆಯಿಂದ ನಮಗೆ ಸಿಗುತ್ತಿಲ್ಲ ಎಂದೂ ಕಾಮೆಂಟ್​ ಬರೆದಿದ್ದಾರೆ.

ಇದಕ್ಕೂ ಮೊದಲು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಿಂದ ವಿಡಿಯೋವೊಂದು ವೈರಲ್​ ಆಗಿತ್ತು. ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ 30-45 ನಿಮಿಷ ಶ್ರೀರಾಮನಾಮ ಬರೆಯುವ ಶಿಕ್ಷೆಯನ್ನು ನೀಡುತ್ತಿದ್ದ ಪೊಲೀಸ್ ಅಧಿಕಾರಿಯ ವಿಡಿಯೋ ಅದಾಗಿತ್ತು. ಇದೀಗ ಮತ್ತೊಮ್ಮೆ ಮಧ್ಯಪ್ರದೇಶ ಪೊಲೀಸರು ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: Viral Video: ಸಿಂಹಕ್ಕೆ ಕಾಟ ಕೊಡುತ್ತಿದೆ ಪುಟ್ಟ ಆಮೆ! ಸಿಂಹದ ಪಜೀತಿ ಕೇಳುವವರು ಯಾರೂ ಇಲ್ವೇ?

Madhya Pradesh cops honouring those who have received the Covid vaccine

Published On - 3:50 pm, Wed, 9 June 21

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​