AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ

Madhya Pradesh Crime: ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jun 07, 2021 | 10:13 AM

Share

ಛತ್ತರ್​ಪುರ​: ಪತ್ನಿ ಮತ್ತು ಮಕ್ಕಳ್ನು ಬಾವಿಗೆ ತಳ್ಳಿ, ಮೇಲಿಂದ ಕಲ್ಲು ಎತ್ತಿಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹುಡುಕುತ್ತಿದ್ದಾರೆ. ಇವನ ಕೃತ್ಯದಿಂದಾಗಿ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಪತ್ನಿ ಮತ್ತು ಮೂರು ತಿಂಗಳ ಮಗಳು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯಪ್ರದೇಶದ ಛತ್ತರ್​​ಪುರದ ರಾಜಾ ಭೈಯಾ ಯಾದವ್​ ಪತ್ನಿ ಮೂರು ತಿಂಗಳ ಹಿಂದಷ್ಟೇ ಹೆಣ್ಣುಮಗುವಿಗೆ ಜನ್ಮನೀಡಿದ್ದರು. ಮೊದಲಿನದ್ದೂ ಮಗಳೇ ಆಗಿದ್ದು, 8 ವರ್ಷ ಆಗಿದೆ. ತವರು ಮನೆಯಲ್ಲೇ ಇದ್ದ ಪತ್ನಿ ಮತ್ತು ಮಕ್ಕಳನ್ನು ಕರೆದುಕೊಂಡು ಬರಲು ಈ ರಾಜಾ ಭೈಯಾ ಹೋಗಿದ್ದ. ಅಲ್ಲೇ ಪಕ್ಕದ ಪನ್ನಾ ಜಿಲ್ಲೆಯಲ್ಲಿ ಪತ್ನಿಯ ತವರು ಮನೆಯಿತ್ತು. ಶನಿವಾರ ಬೈಕ್​ ಮೇಲೆ ಅವರನ್ನು ಕರೆದುಕೊಂಡು ಬರುತ್ತಿದ್ದ ರಾಜಾ ಭೈಯಾ ರಸ್ತೆ ಮಧ್ಯೆ ಸಿಗುವ ಪಡೋಯಿ ಗ್ರಾಮದ ಬಾವಿಯ ಬಳಿ ಬೈಕ್​ ನಿಲ್ಲಿಸಿ, ಪತ್ನಿ ಮತ್ತು ಮಕ್ಕಳನ್ನು ಅದರೊಳಗೆ ತಳ್ಳಿದ್ದಾನೆ. ಮತ್ತೆ ಮೇಲಿಂದ ಕಲ್ಲನ್ನೂ ಎಸೆದಿದ್ದಾನೆ. ಕೂಗಾಟ ಕೇಳಿ ಸ್ಥಳೀಯರೆಲ್ಲ ಬಂದು ಪತ್ನಿ ಮತ್ತು ಮೂರು ತಿಂಗಳ ಮಗುವನ್ನು ಕೂಡಲೇ ರಕ್ಷಿಸಿದ್ದಾರೆ. ಆದರೆ 8ವರ್ಷದ ಮಗಳು ಬದುಕುಳಿಯಲಿಲ್ಲ ಎಂದು ಚಂಡ್ಲಾ ಪೊಲೀಸ್​ ಠಾಣೆಯ ಅಧಿಕಾರಿ ರಾಜೇಂದ್ರ ಸಿಂಗ್​ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ರಾಜಾ ಯಾದವ್​ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ ; ‘ಸತ್ಯಕ್ಕೆ ಬ್ಹಾಳ ಮುಖಗಳಿರ‍್ತವೆ ಎಲ್ವನ್ನೂ ಮುಟ್ಟಿ ನೋಡಬೇಕ, ಇಲ್ದಿದ್ರೆ ಗೊಣಕ್ಕಂತ ಸತ್ತೋಗಿಬಿಡ್ತೀವಿ’

Madhya Pradesh Crime A Man Pushes Wife and two Daughters Into Well In Madhya Pradesh

Published On - 9:55 am, Mon, 7 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ