AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ

Madhya Pradesh Crime: ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 07, 2021 | 10:13 AM

Share

ಛತ್ತರ್​ಪುರ​: ಪತ್ನಿ ಮತ್ತು ಮಕ್ಕಳ್ನು ಬಾವಿಗೆ ತಳ್ಳಿ, ಮೇಲಿಂದ ಕಲ್ಲು ಎತ್ತಿಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹುಡುಕುತ್ತಿದ್ದಾರೆ. ಇವನ ಕೃತ್ಯದಿಂದಾಗಿ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಪತ್ನಿ ಮತ್ತು ಮೂರು ತಿಂಗಳ ಮಗಳು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯಪ್ರದೇಶದ ಛತ್ತರ್​​ಪುರದ ರಾಜಾ ಭೈಯಾ ಯಾದವ್​ ಪತ್ನಿ ಮೂರು ತಿಂಗಳ ಹಿಂದಷ್ಟೇ ಹೆಣ್ಣುಮಗುವಿಗೆ ಜನ್ಮನೀಡಿದ್ದರು. ಮೊದಲಿನದ್ದೂ ಮಗಳೇ ಆಗಿದ್ದು, 8 ವರ್ಷ ಆಗಿದೆ. ತವರು ಮನೆಯಲ್ಲೇ ಇದ್ದ ಪತ್ನಿ ಮತ್ತು ಮಕ್ಕಳನ್ನು ಕರೆದುಕೊಂಡು ಬರಲು ಈ ರಾಜಾ ಭೈಯಾ ಹೋಗಿದ್ದ. ಅಲ್ಲೇ ಪಕ್ಕದ ಪನ್ನಾ ಜಿಲ್ಲೆಯಲ್ಲಿ ಪತ್ನಿಯ ತವರು ಮನೆಯಿತ್ತು. ಶನಿವಾರ ಬೈಕ್​ ಮೇಲೆ ಅವರನ್ನು ಕರೆದುಕೊಂಡು ಬರುತ್ತಿದ್ದ ರಾಜಾ ಭೈಯಾ ರಸ್ತೆ ಮಧ್ಯೆ ಸಿಗುವ ಪಡೋಯಿ ಗ್ರಾಮದ ಬಾವಿಯ ಬಳಿ ಬೈಕ್​ ನಿಲ್ಲಿಸಿ, ಪತ್ನಿ ಮತ್ತು ಮಕ್ಕಳನ್ನು ಅದರೊಳಗೆ ತಳ್ಳಿದ್ದಾನೆ. ಮತ್ತೆ ಮೇಲಿಂದ ಕಲ್ಲನ್ನೂ ಎಸೆದಿದ್ದಾನೆ. ಕೂಗಾಟ ಕೇಳಿ ಸ್ಥಳೀಯರೆಲ್ಲ ಬಂದು ಪತ್ನಿ ಮತ್ತು ಮೂರು ತಿಂಗಳ ಮಗುವನ್ನು ಕೂಡಲೇ ರಕ್ಷಿಸಿದ್ದಾರೆ. ಆದರೆ 8ವರ್ಷದ ಮಗಳು ಬದುಕುಳಿಯಲಿಲ್ಲ ಎಂದು ಚಂಡ್ಲಾ ಪೊಲೀಸ್​ ಠಾಣೆಯ ಅಧಿಕಾರಿ ರಾಜೇಂದ್ರ ಸಿಂಗ್​ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ರಾಜಾ ಯಾದವ್​ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ ; ‘ಸತ್ಯಕ್ಕೆ ಬ್ಹಾಳ ಮುಖಗಳಿರ‍್ತವೆ ಎಲ್ವನ್ನೂ ಮುಟ್ಟಿ ನೋಡಬೇಕ, ಇಲ್ದಿದ್ರೆ ಗೊಣಕ್ಕಂತ ಸತ್ತೋಗಿಬಿಡ್ತೀವಿ’

Madhya Pradesh Crime A Man Pushes Wife and two Daughters Into Well In Madhya Pradesh

Published On - 9:55 am, Mon, 7 June 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್