AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ

Madhya Pradesh Crime: ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 07, 2021 | 10:13 AM

Share

ಛತ್ತರ್​ಪುರ​: ಪತ್ನಿ ಮತ್ತು ಮಕ್ಕಳ್ನು ಬಾವಿಗೆ ತಳ್ಳಿ, ಮೇಲಿಂದ ಕಲ್ಲು ಎತ್ತಿಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹುಡುಕುತ್ತಿದ್ದಾರೆ. ಇವನ ಕೃತ್ಯದಿಂದಾಗಿ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಪತ್ನಿ ಮತ್ತು ಮೂರು ತಿಂಗಳ ಮಗಳು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯಪ್ರದೇಶದ ಛತ್ತರ್​​ಪುರದ ರಾಜಾ ಭೈಯಾ ಯಾದವ್​ ಪತ್ನಿ ಮೂರು ತಿಂಗಳ ಹಿಂದಷ್ಟೇ ಹೆಣ್ಣುಮಗುವಿಗೆ ಜನ್ಮನೀಡಿದ್ದರು. ಮೊದಲಿನದ್ದೂ ಮಗಳೇ ಆಗಿದ್ದು, 8 ವರ್ಷ ಆಗಿದೆ. ತವರು ಮನೆಯಲ್ಲೇ ಇದ್ದ ಪತ್ನಿ ಮತ್ತು ಮಕ್ಕಳನ್ನು ಕರೆದುಕೊಂಡು ಬರಲು ಈ ರಾಜಾ ಭೈಯಾ ಹೋಗಿದ್ದ. ಅಲ್ಲೇ ಪಕ್ಕದ ಪನ್ನಾ ಜಿಲ್ಲೆಯಲ್ಲಿ ಪತ್ನಿಯ ತವರು ಮನೆಯಿತ್ತು. ಶನಿವಾರ ಬೈಕ್​ ಮೇಲೆ ಅವರನ್ನು ಕರೆದುಕೊಂಡು ಬರುತ್ತಿದ್ದ ರಾಜಾ ಭೈಯಾ ರಸ್ತೆ ಮಧ್ಯೆ ಸಿಗುವ ಪಡೋಯಿ ಗ್ರಾಮದ ಬಾವಿಯ ಬಳಿ ಬೈಕ್​ ನಿಲ್ಲಿಸಿ, ಪತ್ನಿ ಮತ್ತು ಮಕ್ಕಳನ್ನು ಅದರೊಳಗೆ ತಳ್ಳಿದ್ದಾನೆ. ಮತ್ತೆ ಮೇಲಿಂದ ಕಲ್ಲನ್ನೂ ಎಸೆದಿದ್ದಾನೆ. ಕೂಗಾಟ ಕೇಳಿ ಸ್ಥಳೀಯರೆಲ್ಲ ಬಂದು ಪತ್ನಿ ಮತ್ತು ಮೂರು ತಿಂಗಳ ಮಗುವನ್ನು ಕೂಡಲೇ ರಕ್ಷಿಸಿದ್ದಾರೆ. ಆದರೆ 8ವರ್ಷದ ಮಗಳು ಬದುಕುಳಿಯಲಿಲ್ಲ ಎಂದು ಚಂಡ್ಲಾ ಪೊಲೀಸ್​ ಠಾಣೆಯ ಅಧಿಕಾರಿ ರಾಜೇಂದ್ರ ಸಿಂಗ್​ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ರಾಜಾ ಯಾದವ್​ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ ; ‘ಸತ್ಯಕ್ಕೆ ಬ್ಹಾಳ ಮುಖಗಳಿರ‍್ತವೆ ಎಲ್ವನ್ನೂ ಮುಟ್ಟಿ ನೋಡಬೇಕ, ಇಲ್ದಿದ್ರೆ ಗೊಣಕ್ಕಂತ ಸತ್ತೋಗಿಬಿಡ್ತೀವಿ’

Madhya Pradesh Crime A Man Pushes Wife and two Daughters Into Well In Madhya Pradesh

Published On - 9:55 am, Mon, 7 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ