AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ

Madhya Pradesh Crime: ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.

ದಾರಿ ಮಧ್ಯೆ ಬೈಕ್​ ನಿಲ್ಲಿಸಿ, ಪತ್ನಿ-ಮಕ್ಕಳನ್ನು ಬಾವಿಗೆ ತಳ್ಳಿದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 07, 2021 | 10:13 AM

Share

ಛತ್ತರ್​ಪುರ​: ಪತ್ನಿ ಮತ್ತು ಮಕ್ಕಳ್ನು ಬಾವಿಗೆ ತಳ್ಳಿ, ಮೇಲಿಂದ ಕಲ್ಲು ಎತ್ತಿಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹುಡುಕುತ್ತಿದ್ದಾರೆ. ಇವನ ಕೃತ್ಯದಿಂದಾಗಿ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಪತ್ನಿ ಮತ್ತು ಮೂರು ತಿಂಗಳ ಮಗಳು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಧ್ಯಪ್ರದೇಶದ ಛತ್ತರ್​​ಪುರದ ರಾಜಾ ಭೈಯಾ ಯಾದವ್​ ಪತ್ನಿ ಮೂರು ತಿಂಗಳ ಹಿಂದಷ್ಟೇ ಹೆಣ್ಣುಮಗುವಿಗೆ ಜನ್ಮನೀಡಿದ್ದರು. ಮೊದಲಿನದ್ದೂ ಮಗಳೇ ಆಗಿದ್ದು, 8 ವರ್ಷ ಆಗಿದೆ. ತವರು ಮನೆಯಲ್ಲೇ ಇದ್ದ ಪತ್ನಿ ಮತ್ತು ಮಕ್ಕಳನ್ನು ಕರೆದುಕೊಂಡು ಬರಲು ಈ ರಾಜಾ ಭೈಯಾ ಹೋಗಿದ್ದ. ಅಲ್ಲೇ ಪಕ್ಕದ ಪನ್ನಾ ಜಿಲ್ಲೆಯಲ್ಲಿ ಪತ್ನಿಯ ತವರು ಮನೆಯಿತ್ತು. ಶನಿವಾರ ಬೈಕ್​ ಮೇಲೆ ಅವರನ್ನು ಕರೆದುಕೊಂಡು ಬರುತ್ತಿದ್ದ ರಾಜಾ ಭೈಯಾ ರಸ್ತೆ ಮಧ್ಯೆ ಸಿಗುವ ಪಡೋಯಿ ಗ್ರಾಮದ ಬಾವಿಯ ಬಳಿ ಬೈಕ್​ ನಿಲ್ಲಿಸಿ, ಪತ್ನಿ ಮತ್ತು ಮಕ್ಕಳನ್ನು ಅದರೊಳಗೆ ತಳ್ಳಿದ್ದಾನೆ. ಮತ್ತೆ ಮೇಲಿಂದ ಕಲ್ಲನ್ನೂ ಎಸೆದಿದ್ದಾನೆ. ಕೂಗಾಟ ಕೇಳಿ ಸ್ಥಳೀಯರೆಲ್ಲ ಬಂದು ಪತ್ನಿ ಮತ್ತು ಮೂರು ತಿಂಗಳ ಮಗುವನ್ನು ಕೂಡಲೇ ರಕ್ಷಿಸಿದ್ದಾರೆ. ಆದರೆ 8ವರ್ಷದ ಮಗಳು ಬದುಕುಳಿಯಲಿಲ್ಲ ಎಂದು ಚಂಡ್ಲಾ ಪೊಲೀಸ್​ ಠಾಣೆಯ ಅಧಿಕಾರಿ ರಾಜೇಂದ್ರ ಸಿಂಗ್​ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಪತಿಗೆ ಎರಡನೇಯದೂ ಹೆಣ್ಣುಮಗುವೇ ಹುಟ್ಟಿದ್ದು ಸ್ವಲ್ಪವೂ ಇಷ್ಟವಿರಲಿಲ್ಲ. ಆತನಿಗೆ ಮಗ ಬೇಕು ಎಂದು ಬಲವಾದ ಆಸೆಯಿತ್ತು. ಅದೇ ಕಾರಣಕ್ಕೆ ಈ ಕೃತ್ಯ ಮಾಡಿದ್ದಾನೆ ಎಂದು ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ರಾಜಾ ಯಾದವ್​ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ ; ‘ಸತ್ಯಕ್ಕೆ ಬ್ಹಾಳ ಮುಖಗಳಿರ‍್ತವೆ ಎಲ್ವನ್ನೂ ಮುಟ್ಟಿ ನೋಡಬೇಕ, ಇಲ್ದಿದ್ರೆ ಗೊಣಕ್ಕಂತ ಸತ್ತೋಗಿಬಿಡ್ತೀವಿ’

Madhya Pradesh Crime A Man Pushes Wife and two Daughters Into Well In Madhya Pradesh

Published On - 9:55 am, Mon, 7 June 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ