AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿದ ಮುಖ್ಯೋಪಾಧ್ಯಾಯರು

ತಮ್ಮ ನಡವಳಿಕೆಯಿಂದ ಮಕ್ಕಳ ಮೇಲೆ ಯಾವ ರೀತಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎನ್ನುವ ಕಿಂಚಿತ್ತೂ ಅರಿವಿಲ್ಲದೆ ಮುಖ್ಯೋಪಾಧ್ಯಾಯರೊಬ್ಬರು ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳಲ್ಲಿ ಆತಂಕ ಸೃಷ್ಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮದ್ಯದ ಅಮಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿದ ಮುಖ್ಯೋಪಾಧ್ಯಾಯರು
ಶಿಕ್ಷಕರು
ನಯನಾ ರಾಜೀವ್
|

Updated on: Jul 08, 2024 | 11:43 AM

Share

ಮುಖ್ಯೋಪಾಧ್ಯಾಯರೊಬ್ಬರು ಮದ್ಯದ ಅಮಿಲಿನಲ್ಲಿ ಶಾಲೆಗೆ ಬಂದು ಮಕ್ಕಳನ್ನು ಓಡಿಸಿ ನೆಲದ ಮೇಲೆ ಮಲಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪಾನಮತ್ತರಾಗಿ ಬಂದಿದ್ದ ಶಿಕ್ಷಕರು ಮಕ್ಕಳಿಗೆ ರಜೆ ಕೊಟ್ಟು ಕಳುಹಿಸಿದ್ದಾರೆ. ಅಲ್ಲೇ ನೆಲದ ಮೇಲೆ ನಿದ್ದೆಗೆ ಜಾರಿದ್ದಾರೆ. ಈ ಘಟನೆ ರೇವಾದಲ್ಲಿ ನಡೆದಿದೆ.

ಮುಖ್ಯೋಪಾಧ್ಯಾಯರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಖ್ಯೋಪಾಧ್ಯಾಯರು ಕುಡಿದು ಶಾಲೆಯೊಳಗೆ ಮಲಗಿದ್ದಾರೆ, ಈ ಮುಖ್ಯೋಪಾಧ್ಯಾಯರ ಹೆಸರು ರಮಾಕಾಂತ್.

ಪಾನಮತ್ತರಾಗಿ ಶಾಲೆಗೆ ಆಗಮಿಸಿ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಓಡಿಸಿ ಅಲ್ಲಿಯೇ ಹರಡಿದ್ದ ಗೋಣಿಚೀಲದ ಮೇಲೆಯೇ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆಗೊಂಡಿರುವ ಮುಖ್ಯೋಪಾಧ್ಯಾಯ ರಮಾಕಾಂತ್ ವರ್ಮಾ ನಿತ್ಯ ಇದೇ ರೀತಿ ನಡೆದುಕೊಳ್ಳುತ್ತಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಶಿಕ್ಷಣ ಸಚಿವರ ಎಚ್ಚರಿಕೆ ನಂತರವೂ ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಛಗೊಳಿಸಿದ ದೈಹಿಕ ಶಿಕ್ಷಕ

ಹಲವು ಬಾರಿ ಮುಖ್ಯೋಪಾಧ್ಯಾಯರು ಶಾಲೆಯ ತರಗತಿ ಕೊಠಡಿಯಲ್ಲಿಯೇ ಮಲಗುತ್ತಿದ್ದರು. ಇವರ ನಡವಳಿಕೆಯಿಂದ ಮಕ್ಕಳು ಹಾಗೂ ಅವರ ಪೋಷಕರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿರುವ ಮಹಿಳಾ ಶಿಕ್ಷಕಿಯೂ ಆತಂಕಕ್ಕೊಳಗಾಗಿದ್ದಾರೆ.

ವೈರಲ್ ಆಗಿರುವ ವಿಡಿಯೋ ನಮ್ಮ ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ತಿಳಿಸಿದ್ದಾರೆ. ತನಿಖೆಯ ನಂತರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಶಿಕ್ಷಕರು ಮದ್ಯ ಸೇವಿಸಿ ತರಗತಿಗೆ ಬಂದಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

ಇದರೊಂದಿಗೆ ಶಾಲೆಯಲ್ಲಿ ಯಾವುದೇ ರೀತಿಯ ಅಶಿಸ್ತು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಂತಹವರ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಯಾವುದೇ ಶಿಕ್ಷಕರು ಮದ್ಯಪಾನ ಮಾಡುವ ಚಟ ಹೊಂದಿದ್ದರೆ ಅಂತಹವರು ಶಿಕ್ಷಣ ಇಲಾಖೆಯಲ್ಲಿ ಇರಬಾರದು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು