AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; 8 ವರ್ಷದ ಬಾಲಕಿ ಸಾವು, ಐವರ ಸ್ಥಿತಿ ಗಂಭೀರ

ಖಜೂರಿ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಗುತ್ತಿಗೆದಾರನಾಗಿದ್ದ 40 ವರ್ಷದ ಕಿಶೋರ್ ಜಾಧವ್ ಹಣಕಾಸಿನ ಸಮಸ್ಯೆಗಳಿಂದಾಗಿ ಬಹಳ ಒತ್ತಡಕ್ಕೊಳಗಾಗಿದ್ದರು.

ಬಡತನದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; 8 ವರ್ಷದ ಬಾಲಕಿ ಸಾವು, ಐವರ ಸ್ಥಿತಿ ಗಂಭೀರ
ಆತ್ಮಹತ್ಯೆಗೆ ಯತ್ನಿಸಿದ ಮಧ್ಯಪ್ರದೇಶದ ಕುಟುಂಬImage Credit source: NDTV
TV9 Web
| Edited By: |

Updated on: Jan 12, 2023 | 6:38 PM

Share

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ (Bhopal) ಬಡತನದಿಂದ ಬಳಲುತ್ತಿದ್ದ ಕುಟುಂಬವೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಮನೆಯಲ್ಲಿರುವ 6 ಜನರ ಕುಟುಂಬ ಇಂದು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

ಖಜೂರಿ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಗುತ್ತಿಗೆದಾರನಾಗಿದ್ದ 40 ವರ್ಷದ ಕಿಶೋರ್ ಜಾಧವ್ ಹಣಕಾಸಿನ ಸಮಸ್ಯೆಗಳಿಂದಾಗಿ ಬಹಳ ಒತ್ತಡಕ್ಕೊಳಗಾಗಿದ್ದರು. ಇದರಿಂದ ಅವರು ಮನೆಯವರೆಲ್ಲರಿಗೂ ವಿಷ ನೀಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಆದರೆ, ದುರದೃಷ್ಟವಶಾತ್ ಕಿಶೋರ್ ಅವರ 8 ವರ್ಷದ ಮಗಳು ಮೃತಪಟ್ಟಿದ್ದಾಳೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ

ಬುಧವಾರ ಕಿಶೋರ್ ಮತ್ತು ಅವರ 35 ವರ್ಷದ ಪತ್ನಿ ಸೀತಾ ವಿಷ ಸೇವಿಸಿ ತಮ್ಮ ಮಕ್ಕಳಾದ ಕಾಂಚನ್ (15), ಪೂರ್ವಾ (8), ಅಣ್ಣು (10) ಮತ್ತು ಅಭಯ್ (12) ಅವರಿಗೆ ವಿಷ ಮಿಶ್ರಿತ ಹಾಲನ್ನು ಕುಡಿಸಿದ್ದರು. ಜೋರಾಗಿ ಕಿರುಚಾಡುತ್ತಿದ್ದ ಅವರನ್ನು ಅಕ್ಕಪಕ್ಕದವರು ಆಸ್ಪತ್ರೆಗೆ ಸೇರಿಸಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಂದು ಬೆಳಗ್ಗೆ 8 ವರ್ಷದ ಪೂರ್ವಾ ಸಾವನ್ನಪ್ಪಿದ್ದು, ಉಳಿದ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಅವರ ಪೋಷಕರು ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ