ಪರಿಶಿಷ್ಟ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡಿದ ಮಧ್ಯಪ್ರದೇಶದ ಸರ್ಕಾರ

ಕೇಂದ್ರ ಸರ್ಕಾರದ ಅನುದಾನಿತ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಇರುವ ನಿಧಿಯನ್ನು ಮಧ್ಯಪ್ರದೇಶ ಸರ್ಕಾರ ಧಾರ್ಮಿಕ ಕೇಂದ್ರಗಳು ಮತ್ತು ಮ್ಯೂಸಿಯಂ ಅಭಿವೃದ್ಧಿ, ಗೋವುಗಳ ಕಲ್ಯಾಣಕ್ಕೆ ಬಳಕೆ ಮಾಡಿಕೊಂಡಿರುವ ಅಂಶ ಬಹಿರಂಗವಾಗಿದೆ.

ಪರಿಶಿಷ್ಟ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡಿದ ಮಧ್ಯಪ್ರದೇಶದ ಸರ್ಕಾರ
ಗೋವುಗಳು

Updated on: Jul 23, 2024 | 10:11 AM

ಮಧ್ಯಪ್ರದೇಶ ಸರ್ಕಾರವು ಪರಿಶಿಷ್ಟ ಕಲ್ಯಾಣ ನಿಧಿಯನ್ನು ಗೋವು ಹಾಗೂ ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹಿಂದೂಸ್ತಾನ್ ಟೈಮ್ಸ್​ ವರದಿ ಸಿದ್ಧಪಡಿಸಿದೆ. ಹಸುಗಳ ಕಲ್ಯಾಣಕ್ಕೆ (ಗೋ ಸಂವರ್ಧನ್ ಮತ್ತು ಪಶು ಸಂವರ್ಧನ್) 252 ಕೋಟಿ ರೂ. ಮೀಸಲಿಟ್ಟಿದ್ದು, ಎಸ್‌ಸಿ/ಎಸ್‌ಟಿ ಉಪ ಯೋಜನೆಯಿಂದ 95.76 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಹಸುಗಳ ಕಲ್ಯಾಣ ನಿಧಿ ಕಳೆದ ವರ್ಷ ಸುಮಾರು 90 ಕೋಟಿ ರೂ. ಏರಿಕೆಯಾಗಿದೆ.

ಆರು ಧಾರ್ಮಿಕ ಕ್ಷೇತ್ರಗಳ ಪುನರಾಭಿವೃದ್ಧಿಗಾಗಿ, ಪ್ರಸಕ್ತ ಹಣಕಾಸು ವರ್ಷಗಳಲ್ಲಿ ಸುಮಾರು ಅರ್ಧದಷ್ಟು ಹಣವನ್ನು SC/ST ಉಪ ಯೋಜನೆಯಿಂದ ಮೀಸಲಿಡಲಾಗಿದೆ. ಜುಲೈನಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಸರ್ಕಾರವು ಶ್ರೀ ದೇವಿ ಮಹಾಲೋಕ್, ಸೆಹೋರ್‌ನ ಸಲ್ಕಾನ್‌ಪುರ, ಸಂತ ಶ್ರೀ ರವಿದಾಸ್ ಮಹಲೋಕ್, ಸಾಗರ್, ಶ್ರೀ ರಾಮರಾಜ ಮಹಾಲೋಕ್ ಓರ್ಚಾ, ಶ್ರೀ ರಾಮಚಂದ್ರ ವನವಾಸಿ-ಮಹಾಲೋಕ್, ಚಿತ್ರಕುಟ್ ಮತ್ತು ಮಾಜಿ ಪ್ರಧಾನಿಯವರ ಸ್ಮಾರಕವನ್ನು ಅಭಿವೃದ್ಧಿಪಡಿಸಲು 109 ಕೋಟಿ ರೂ. ಘೋಷಿಸಿತು.

ಆರು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಬಳಸಲಾದ ಅರ್ಧದಷ್ಟು ಹಣವನ್ನು ಕೂಡಾ ಎಸ್​​ಸಿ,ಎಸ್ಟಿ ಉಪಯೋಜನೆಯಿಂದ ಬಳಸಿಕೊಳ್ಳಲಾಗಿದೆ. ಮಧ್ಯಪ್ರದೇಶವು ಕರ್ನಾಟಕದ ಬಳಿಕ ಎಸ್​ಸಿಎಸ್ಟಿ ನಿಧಿಯನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿರುವ ಎರಡನೇ ರಾಜ್ಯವಾಗಿದೆ. ಕರ್ನಾಟಕ ಸರ್ಕಾರ ಕಲ್ಯಾಣ ಯೋಜನೆಗಳಿಗಾಗಿ 14 ಸಾವಿರ ಕೋಟಿ ರೂಪಾಯಿಗಳನ್ನು ಈ ಉಪಯೋಜನೆಯಿಂದ ವರ್ಗಾಯಿಸಲಾಗಿತ್ತು.

ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಉತ್ತೇಜಿಸಲು ರಾಜ್ಯಗಳಿಗೆ ಒದಗಿಸುವ ಸಂವಿಧಾನದ 46 ನೇ ವಿಧಿಯ ನಿಬಂಧನೆಗಳನ್ನು ಅನುಷ್ಠಾನಗೊಳಿಸಲು 1974 ರಲ್ಲಿ ಎಸ್ಟಿ ಉಪ ಯೋಜನೆ ಮತ್ತು 1979-80 ರಲ್ಲಿ ಎಸ್ಸಿ ಉಪ ಯೋಜನೆಯನ್ನು ಪರಿಚಯಿಸಲಾಯಿತು.

ಮತ್ತಷ್ಟು ಓದಿ: ಗೋಶಾಲೆಗೆ ಅನುದಾನದ ಕೊರತೆ; ಗೋವುಗಳ ದೈನಂದಿನ ನೆರವಿನ ಹಣ ಹೆಚ್ಚಿಸುವಂತೆ ಶಿವಲಿಂಗಾನಂದ ಶ್ರೀಗಳಿಂದ ಸರ್ಕಾರಕ್ಕೆ ಮನವಿ

ದೇವಾಲಯಗಳು, ವಸ್ತುಸಂಗ್ರಹಾಲಯಗಳು ಮತ್ತು ಗೋಶಾಲೆಗಳ ನಿರ್ಮಾಣಕ್ಕೆ ಎಸ್‌ಸಿ/ಎಸ್‌ಟಿ ಉಪ ಯೋಜನೆ (ಉಪ ಯೋಜನೆ) ಬಳಸುವುದು ಸಮರ್ಥನೀಯವಲ್ಲ ಮತ್ತು ಅನುಮತಿಸುವುದಿಲ್ಲ ಎಂದು ಬುಡಕಟ್ಟು ವ್ಯವಹಾರಗಳ ತಜ್ಞ ವಿನೇಶ್ ಝಾ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us