AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಬೆಲ್ಟ್ ಕಟ್ಟಿ, ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪಿ ಸಮೀರ್ ಖಾನ್ ಮನೆ ಕೆಡವಿದ ಸ್ಥಳೀಯ ಆಡಳಿತ

ವರದಿಯ ಪ್ರಕಾರ, ವೈರಲ್ ವುಡಿಯೊವನ್ನು ತಿಲಾ ಜಮಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ ವಿಜಯ್ ರಾಮಚಂದಾನಿ ಎಂಬ ವ್ಯಕ್ತಿಯ ಕುತ್ತಿಗೆಗೆ ಬೆಲ್ಟ್ ಹಾಕಲಾಗಿದ್ದು ಆತ ತನ್ನ ಮುಂದೆ ನಿಂತಿದ್ದ ಆರು ಮಂದಿಗೆ ಕ್ಷಮೆಯಾಚಿಸುತ್ತಿರುವುದು ಕಾಣಿಸುತ್ತದೆ

ಮಧ್ಯಪ್ರದೇಶ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಬೆಲ್ಟ್ ಕಟ್ಟಿ, ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪಿ ಸಮೀರ್ ಖಾನ್ ಮನೆ ಕೆಡವಿದ ಸ್ಥಳೀಯ ಆಡಳಿತ
ಆರೋಪಿಯ ಮನೆ ಧ್ವಂಸ
TV9 Web
| Edited By: |

Updated on: Jun 19, 2023 | 7:14 PM

Share

ಭೋಪಾಲ್‌ನಲ್ಲಿ (Bhopal) ವ್ಯಕ್ತಿಯೊಬ್ಬನನ್ನು ಕತ್ತಿಗೆ ಪಟ್ಟಿ ಕಟ್ಟಿ ನಾಯಿಯಂತೆ ವರ್ತಿಸುವಂತೆ ಮಾಡಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶ (Madhya Pradesh) ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಘಟನೆಯ ಕುರಿತು ಭೋಪಾಲ್ ಪೊಲೀಸರು ಆರು ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದು ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ಮೂವರ ವಿರುದ್ಧ ಮತ್ತೊಮ್ಮೆ ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ 1980 (National Security Act)ಅನ್ನು ಸಹ ಅನ್ವಯಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಎನ್‌ಐಗೆ ತಿಳಿಸಿದರು.

ಯುವಕನಿಗೆ ಕಿರುಕುಳ ನೀಡಿ ಥಳಿಸಿದ ಆರೋಪ ಹೊತ್ತಿರುವ ಸಮೀರ್ ಖಾನ್ ಎಂಬಾತನ ಮನೆಯನ್ನು ಪೊಲೀಸರ ಸಮ್ಮುಖದಲ್ಲಿ ಸ್ಥಳೀಯ ಆಡಳಿತ ಧ್ವಂಸಗೊಳಿಸಿದೆ. ಸಮೀರ್, ಫೈಜಾನ್ ಮತ್ತು ಸಾಜಿದ್ ಎಂಬ ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭೋಪಾಲ್ ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಲೈವ್ ಹಿಂದೂಸ್ತಾನ್ ವರದಿ ಮಾಡಿದೆ.

ವರದಿಯ ಪ್ರಕಾರ, ವೈರಲ್ ವುಡಿಯೊವನ್ನು ತಿಲಾ ಜಮಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಯಾಗಿದೆ. ವಿಡಿಯೋದಲ್ಲಿ ವಿಜಯ್ ರಾಮಚಂದಾನಿ ಎಂಬ ವ್ಯಕ್ತಿಯ ಕುತ್ತಿಗೆಗೆ ಬೆಲ್ಟ್ ಹಾಕಲಾಗಿದ್ದು ಆತ ತನ್ನ ಮುಂದೆ ನಿಂತಿದ್ದ ಆರು ಮಂದಿಗೆ ಕ್ಷಮೆಯಾಚಿಸುತ್ತಿರುವುದು ಕಾಣಿಸುತ್ತದೆ. ಈ ಆರು ಮಂದಿ ತನ್ನನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಜೂನ್ 23 ರಂದು ಪಾಟ್ನಾದಲ್ಲಿ ವಿಪಕ್ಷ ಸಭೆ; ಬಿಹಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ನಿತೀಶ್‌ರನ್ನು ಕೇಳಿ: ಅನುರಾಗ್ ಠಾಕೂರ್

ಆರೋಪಿಗಳನ್ನು 4-5 ಗಂಟೆಗಳಲ್ಲಿ ಬಂಧಿಸಲಾಗಿದೆ. ಅವರ ವಿರುದ್ಧ ಬುಲ್ಡೋಜರ್ ಕ್ರಮ ಕೈಗೊಳ್ಳಲಾಗುವುದು. ನಾವು ಭೋಪಾಲ್‌ನಲ್ಲಿ ಇಂತಹ ಕ್ರಮವನ್ನು ಕೈಗೊಳ್ಳುತ್ತೇವೆ ಅದು ರಾಜ್ಯಾದ್ಯಂತ ಸಂದೇಶವನ್ನು ಕಳುಹಿಸುತ್ತದೆ ಎಂದು ಮಧ್ಯಪ್ರದೇಶದ ಗೃಹ ಸಚಿವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!