AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ, ಇದರಲ್ಲಿ ನನ್ನ ತಪ್ಪೇನಿದೆ ಎಂದ ಆರೋಗ್ಯ ಕಾರ್ಯಕರ್ತ

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಸಾಗರ್​ನಲ್ಲಿ ವರದಿಯಾಗಿದೆ.

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ, ಇದರಲ್ಲಿ ನನ್ನ ತಪ್ಪೇನಿದೆ ಎಂದ ಆರೋಗ್ಯ ಕಾರ್ಯಕರ್ತ
Health WorkerImage Credit source: ANI
Follow us
TV9 Web
| Updated By: ನಯನಾ ರಾಜೀವ್

Updated on:Jul 28, 2022 | 12:32 PM

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಸಾಗರ್​ನಲ್ಲಿ ವರದಿಯಾಗಿದೆ. ಅಧಿಕಾರಿಗಳು ಕೇವಲ ಒಂದೇ ಸಿರಿಂಜ್ ಕಳುಹಿಸಿದ್ದಾರೆ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್​ನಲ್ಲಿ ಲಸಿಕೆ ಹಾಕಲು ಇಲಾಖೆಯ ಮುಖ್ಯಸ್ಥರು ಹೇಳಿದ್ದಾರೆ ಇದರಲ್ಲಿ ನನ್ನ ತಪ್ಪೇನಿದೆ ಎಂದು ಆರೋಗ್ಯ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

1990ರ ದಶಕದಿಂದಲೂ ಎಚ್‌ಐವಿ ಹರಡಲು ಆರಂಭಿಸಿದಾಗಿನಿಂದ ಒಬ್ಬರಿಗೆ ಒಂದು ಸಿರಿಂಜ್​ನಂತೆ ಬಳಕೆ ಮಾಡಬೇಕು, ಒಂದೇ ಸಿರಿಂಜ್ ಇಬ್ಬರಿಗೆ ಬಳಕೆ ಮಾಡಬಾರದು ಎನ್ನುವ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಆದರೆ ಈ ವ್ಯಕ್ತಿ 30 ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್​ನಲ್ಲಿ ಲಸಿಕೆ ನೀಡಿದ್ದಾರೆ. ಒಂದು ಸಿರಿಂಜ್ ಅನ್ನು ಹಲವಾರು ಜನರಿಗೆ ಚುಚ್ಚುಮದ್ದು ಮಾಡಲು ಬಳಸಬಾರದು ಎಂದು ನಿಮಗೆ ತಿಳಿದಿದೆಯೇ ಎಂದು ಕೇಳಿದಾಗ ನನಗೆ ಅದು ತಿಳಿದಿದೆ.

ಅದಕ್ಕಾಗಿಯೇ ನಾನು ಕೇವಲ ಒಂದು ಸಿರಿಂಜ್ ಅನ್ನು ಬಳಸಬೇಕೇ ಎಂದು ಅಧಿಕಾರಿಯನ್ನು ಕೇಳಿದೆ ಮತ್ತು ಅವರು ಹೌದು ಎಂದು ಹೇಳಿದರು. ಇದರಲ್ಲಿ ನನ್ನ ತಪ್ಪೇನಿದೆ ಅವರು ಹೇಳಿದ್ದನ್ನು ನಾನು ಮಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಳಿಗ್ಗೆ ಲಸಿಕೆ ಮತ್ತು ಅಗತ್ಯವಿರುವ ಇತರ ವಸ್ತುಗಳನ್ನು ಕಳುಹಿಸುವ ಉಸ್ತುವಾರಿ ವಹಿಸಿದ್ದ ಜಿಲ್ಲಾ ಲಸಿಕೆ ಅಧಿಕಾರಿ ಡಾ.ರಾಕೇಶ್ ರೋಷನ್ ವಿರುದ್ಧವೂ ಆರೋಗ್ಯ ಇಲಾಖೆ ವಿಚಾರಣೆ ಆರಂಭಿಸಿದೆ.

ಸಾಗರ್ ನಗರದ ಜೈನ್ ಪಬ್ಲಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ ಶಿಬಿರದ ವೇಳೆ ಈ ಘಟನೆ ನಡೆದಿದೆ. ಒಂದೇ ಸಿರಿಂಜ್‌ನಿಂದ ಮಕ್ಕಳಿಗೆ ಲಸಿಕೆ ಹಾಕುತ್ತಿರುವುದನ್ನು ಗಮನಿಸಿದ ಪೋಷಕರು ಆತಂಕ ವ್ಯಕ್ತಪಡಿಸಿದರು.

ಪ್ರಭಾರಿ ಜಿಲ್ಲಾಧಿಕಾರಿ ಕ್ಷಿತಿಜ್ ಸಿಂಘಾಲ್ ಅವರು ತಕ್ಷಣ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿಗಳಿಗೆ ತಪಾಸಣೆ ನಡೆಸುವಂತೆ ಸೂಚಿಸಿದರು. ಆದರೆ ತಪಾಸಣೆ ವೇಳೆ ಜಿತೇಂದ್ರ ಹಾಜರಿರಲಿಲ್ಲ. ಘಟನೆ ಬೆಳಕಿಗೆ ಬಂದಾಗಿನಿಂದ ಅವರ ಫೋನ್ ಕೂಡ ಸ್ವಿಚ್ಡ್​ ಆಫ್ ಆಗಿತ್ತು ಎಂದು ಮೂಲಗಳು ತಿಳಿಸಿವೆ.

Published On - 12:30 pm, Thu, 28 July 22

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್