AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ, ಇದರಲ್ಲಿ ನನ್ನ ತಪ್ಪೇನಿದೆ ಎಂದ ಆರೋಗ್ಯ ಕಾರ್ಯಕರ್ತ

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಸಾಗರ್​ನಲ್ಲಿ ವರದಿಯಾಗಿದೆ.

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ, ಇದರಲ್ಲಿ ನನ್ನ ತಪ್ಪೇನಿದೆ ಎಂದ ಆರೋಗ್ಯ ಕಾರ್ಯಕರ್ತ
Health WorkerImage Credit source: ANI
TV9 Web
| Edited By: |

Updated on:Jul 28, 2022 | 12:32 PM

Share

ಒಂದೇ ಸಿರಿಂಜ್​ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಸಾಗರ್​ನಲ್ಲಿ ವರದಿಯಾಗಿದೆ. ಅಧಿಕಾರಿಗಳು ಕೇವಲ ಒಂದೇ ಸಿರಿಂಜ್ ಕಳುಹಿಸಿದ್ದಾರೆ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್​ನಲ್ಲಿ ಲಸಿಕೆ ಹಾಕಲು ಇಲಾಖೆಯ ಮುಖ್ಯಸ್ಥರು ಹೇಳಿದ್ದಾರೆ ಇದರಲ್ಲಿ ನನ್ನ ತಪ್ಪೇನಿದೆ ಎಂದು ಆರೋಗ್ಯ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

1990ರ ದಶಕದಿಂದಲೂ ಎಚ್‌ಐವಿ ಹರಡಲು ಆರಂಭಿಸಿದಾಗಿನಿಂದ ಒಬ್ಬರಿಗೆ ಒಂದು ಸಿರಿಂಜ್​ನಂತೆ ಬಳಕೆ ಮಾಡಬೇಕು, ಒಂದೇ ಸಿರಿಂಜ್ ಇಬ್ಬರಿಗೆ ಬಳಕೆ ಮಾಡಬಾರದು ಎನ್ನುವ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಆದರೆ ಈ ವ್ಯಕ್ತಿ 30 ವಿದ್ಯಾರ್ಥಿಗಳಿಗೆ ಒಂದೇ ಸಿರಿಂಜ್​ನಲ್ಲಿ ಲಸಿಕೆ ನೀಡಿದ್ದಾರೆ. ಒಂದು ಸಿರಿಂಜ್ ಅನ್ನು ಹಲವಾರು ಜನರಿಗೆ ಚುಚ್ಚುಮದ್ದು ಮಾಡಲು ಬಳಸಬಾರದು ಎಂದು ನಿಮಗೆ ತಿಳಿದಿದೆಯೇ ಎಂದು ಕೇಳಿದಾಗ ನನಗೆ ಅದು ತಿಳಿದಿದೆ.

ಅದಕ್ಕಾಗಿಯೇ ನಾನು ಕೇವಲ ಒಂದು ಸಿರಿಂಜ್ ಅನ್ನು ಬಳಸಬೇಕೇ ಎಂದು ಅಧಿಕಾರಿಯನ್ನು ಕೇಳಿದೆ ಮತ್ತು ಅವರು ಹೌದು ಎಂದು ಹೇಳಿದರು. ಇದರಲ್ಲಿ ನನ್ನ ತಪ್ಪೇನಿದೆ ಅವರು ಹೇಳಿದ್ದನ್ನು ನಾನು ಮಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬೆಳಿಗ್ಗೆ ಲಸಿಕೆ ಮತ್ತು ಅಗತ್ಯವಿರುವ ಇತರ ವಸ್ತುಗಳನ್ನು ಕಳುಹಿಸುವ ಉಸ್ತುವಾರಿ ವಹಿಸಿದ್ದ ಜಿಲ್ಲಾ ಲಸಿಕೆ ಅಧಿಕಾರಿ ಡಾ.ರಾಕೇಶ್ ರೋಷನ್ ವಿರುದ್ಧವೂ ಆರೋಗ್ಯ ಇಲಾಖೆ ವಿಚಾರಣೆ ಆರಂಭಿಸಿದೆ.

ಸಾಗರ್ ನಗರದ ಜೈನ್ ಪಬ್ಲಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕೆ ಶಿಬಿರದ ವೇಳೆ ಈ ಘಟನೆ ನಡೆದಿದೆ. ಒಂದೇ ಸಿರಿಂಜ್‌ನಿಂದ ಮಕ್ಕಳಿಗೆ ಲಸಿಕೆ ಹಾಕುತ್ತಿರುವುದನ್ನು ಗಮನಿಸಿದ ಪೋಷಕರು ಆತಂಕ ವ್ಯಕ್ತಪಡಿಸಿದರು.

ಪ್ರಭಾರಿ ಜಿಲ್ಲಾಧಿಕಾರಿ ಕ್ಷಿತಿಜ್ ಸಿಂಘಾಲ್ ಅವರು ತಕ್ಷಣ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿಗಳಿಗೆ ತಪಾಸಣೆ ನಡೆಸುವಂತೆ ಸೂಚಿಸಿದರು. ಆದರೆ ತಪಾಸಣೆ ವೇಳೆ ಜಿತೇಂದ್ರ ಹಾಜರಿರಲಿಲ್ಲ. ಘಟನೆ ಬೆಳಕಿಗೆ ಬಂದಾಗಿನಿಂದ ಅವರ ಫೋನ್ ಕೂಡ ಸ್ವಿಚ್ಡ್​ ಆಫ್ ಆಗಿತ್ತು ಎಂದು ಮೂಲಗಳು ತಿಳಿಸಿವೆ.

Published On - 12:30 pm, Thu, 28 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ