AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ

ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿಸಲು ದೇಶದ ಜನರಿಗೆ ಮನವಿ ಮಾಡಿದ್ದರು. ಇದಾದ ನಂತರ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶ ದ್ವಾರಕಾ ಧೀಶ್ ಬನ್ಸಾಲ್ ನ್ಯಾಯಾಲಯಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನ್ಯಾಯಾಧೀಶರು ಸಹ ಇಂಧನ ಉಳಿಸುವ ಪ್ರಯತ್ನಗಳಲ್ಲಿ ಭಾಗವಹಿಸಬೇಕು ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ನ್ಯಾಯಾಲಯಕ್ಕೆ ಸೈಕಲ್ ಸವಾರಿ ಮಾಡಲು ನಿರ್ಧರಿಸಿದ್ದೇನೆ ಎಂದು ನ್ಯಾಯಮೂರ್ತಿ ಬನ್ಸಾಲ್ ಹೇಳಿದ್ದಾರೆ.

ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ
High Court Judge Dwarka Dhish Bansal In Cycle
ಸುಷ್ಮಾ ಚಕ್ರೆ
|

Updated on: May 12, 2026 | 5:18 PM

Share

ನವದೆಹಲಿ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮನವಿ ಮಾಡಿದ್ದರು. ಎಲೆಕ್ಟ್ರಿಕ್ ವಾಹನ, ಸರ್ಕಾರಿ ಸಾರಿಗೆಯನ್ನು ಬಳಸಲು ಕರೆನೀಡಿದ್ದರು. ಅವರ ಮನವಿಗೆ ದೇಶಾದ್ಯಂತ ಸಾಕಷ್ಟು ಉತ್ತಮ ಸ್ಪಂದನೆ ಬರುತ್ತಿದೆ. ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರು ಕೂಡ ಪ್ರಧಾನಿ ಮೋದಿಯ ಮನವಿಗೆ ಸ್ಪಂದಿಸಿ, ನ್ಯಾಯಾಲಯಕ್ಕೆ ಕಾರಿನ ಬದಲು ಸೈಕಲ್​ನಲ್ಲಿ ಆಗಮಿಸಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಅಮೆರಿಕ-ಇರಾನ್ ಯುದ್ಧದಿಂದಾಗಿ ನಡೆಯುತ್ತಿರುವ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶೆ ನ್ಯಾಯಮೂರ್ತಿ ದ್ವಾರಕಾ ಧೀಶ್ ಬನ್ಸಾಲ್ ಇಂದು ನ್ಯಾಯಾಲಯಕ್ಕೆ ಸೈಕಲ್ ಸವಾರಿ ಮಾಡಿಕೊಂಡು ಆಗಮಿಸಿದ್ದಾರೆ. ಅವರ ಹಿಂದೆ ಭದ್ರತಾ ಸಿಬ್ಬಂದಿ ಕೂಡ ಸೈಕಲ್​ನಲ್ಲಿಯೇ ಆಗಮಿಸಿದ್ದಾರೆ.

ಜಬಲ್ಪುರ ಹೈಕೋರ್ಟ್ ಪೀಠದಲ್ಲಿ ನಿಯೋಜಿತರಾಗಿರುವ ನ್ಯಾಯಮೂರ್ತಿ ಬನ್ಸಾಲ್, ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ನ್ಯಾಯಾಲಯದ ಆವರಣಕ್ಕೆ ಸುಮಾರು 3 ಕಿಲೋಮೀಟರ್ ಸೈಕಲ್‌ನಲ್ಲಿ ಪ್ರಯಾಣಿಸಿದರು, ಅವರ ಜೊತೆಗೆ ನ್ಯಾಯಾಲಯದ ಸಿಬ್ಬಂದಿಯೂ ಇದ್ದರು.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಸೇರಿದಂತೆ ಇತರ ವಿಷಯಗಳ ಬಗ್ಗೆ ಮನವಿ ಮಾಡುವುದನ್ನು ನಾನು ಗಮನಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್‌ಗೆ ಸೈಕಲ್‌ನಲ್ಲಿ ಹೋಗಿ ಸಾಮಾನ್ಯ ಜನರಿಗೆ ಸಾಧ್ಯವಾದಾಗಲೆಲ್ಲಾ ಕಡಿಮೆ ದೂರಕ್ಕೆ ಪ್ರಯಾಣಿಸಲು ಸೈಕಲ್ ಬಳಸುವ ಸಂದೇಶ ನೀಡಬೇಕೆಂದು ನಾನು ಸೈಕಲ್​ನಲ್ಲೇ ಕೋರ್ಟ್​ಗೆ ತೆರಳಿದೆ ಎಂದು ನ್ಯಾಯಮೂರ್ತಿ ಬನ್ಸಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ