AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ

Pathaan ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಉಡುಗೆಯನ್ನು"ಅತ್ಯಂತ ಆಕ್ಷೇಪಾರ್ಹ" ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು "ಕೊಳಕು ಮನಸ್ಥಿತಿ" ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ
ನರೋತ್ತಮ್ ಮಿಶ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 14, 2022 | 8:11 PM

Share

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿರುವ ಬಾಲಿವುಡ್ ಚಿತ್ರ ‘ಪಠಾಣ್’ ಚಿತ್ರದಲ್ಲಿನ (Pathaan) ಕೆಲವು ದೃಶ್ಯಗಳನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ತಡೆಯುವುದಾಗಿ ಬುಧವಾರ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಅವರ ಉಡುಗೆಯನ್ನು”ಅತ್ಯಂತ ಆಕ್ಷೇಪಾರ್ಹ” ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು “ಕೊಳಕು ಮನಸ್ಥಿತಿ” ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.ಮಧ್ಯಪ್ರದೇಶ ರಾಜ್ಯ ಸರ್ಕಾರದ ವಕ್ತಾರರಾಗಿರುವ ಮಿಶ್ರಾ, ದೀಪಿಕಾ ಜೆಎನ್‌ಯು ಪ್ರಕರಣದಲ್ಲಿ ಟುಕ್ಡೆ ಟುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 2016ರ ಪ್ರತಿಭಟನೆಯ ನಂತರ ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದನ್ನು ಉಲ್ಲೇಖಿಸಿ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ. ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದು ಆ ಹೊತ್ತಲ್ಲಿ ವಿವಾದವಾಗಿತ್ತು. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಧರಿಸಿದ್ದ ‘ಕೇಸರಿ’ ಬಣ್ಣದ ಉಡುಗೆಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಪಠಾಣ್ ಜನವರಿ 25, 2023 ರಂದು ತೆರೆಗೆ ಬರಲಿದೆ.

ಬಾಲಿವುಡ್‌ನ ನಟ, ನಟಿಯರನ್ನು ಮಿಶ್ರಾ ಟೀಕೆ ಮಾಡಿರುವುದು ಇದು ಮೊದಲೇನೂ ಅಲ್ಲ. ಅಕ್ಟೋಬರ್‌ನಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ’ ನಿರ್ಮಾಪಕರಿಗೆ ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು “ತಪ್ಪು” ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಿಶ್ರಾ ಎಚ್ಚರಿಸಿದ್ದರು.

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಇದಲ್ಲದೆ, ಈ ವರ್ಷದ ಜುಲೈನಲ್ಲಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ ಚಿತ್ರದ ವಿವಾದಾತ್ಮಕ ಪೋಸ್ಟರ್‌ನಲ್ಲಿ ದೇವಿ ಸಿಗರೇಟ್ ಸೇದುತ್ತಿರುವಂತೆ ತೋರಿಸಿದ್ದಕ್ಕೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ