AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ

Pathaan ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಉಡುಗೆಯನ್ನು"ಅತ್ಯಂತ ಆಕ್ಷೇಪಾರ್ಹ" ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು "ಕೊಳಕು ಮನಸ್ಥಿತಿ" ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ
ನರೋತ್ತಮ್ ಮಿಶ್ರಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 14, 2022 | 8:11 PM

Share

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿರುವ ಬಾಲಿವುಡ್ ಚಿತ್ರ ‘ಪಠಾಣ್’ ಚಿತ್ರದಲ್ಲಿನ (Pathaan) ಕೆಲವು ದೃಶ್ಯಗಳನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ತಡೆಯುವುದಾಗಿ ಬುಧವಾರ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಅವರ ಉಡುಗೆಯನ್ನು”ಅತ್ಯಂತ ಆಕ್ಷೇಪಾರ್ಹ” ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು “ಕೊಳಕು ಮನಸ್ಥಿತಿ” ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.ಮಧ್ಯಪ್ರದೇಶ ರಾಜ್ಯ ಸರ್ಕಾರದ ವಕ್ತಾರರಾಗಿರುವ ಮಿಶ್ರಾ, ದೀಪಿಕಾ ಜೆಎನ್‌ಯು ಪ್ರಕರಣದಲ್ಲಿ ಟುಕ್ಡೆ ಟುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 2016ರ ಪ್ರತಿಭಟನೆಯ ನಂತರ ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದನ್ನು ಉಲ್ಲೇಖಿಸಿ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ. ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದು ಆ ಹೊತ್ತಲ್ಲಿ ವಿವಾದವಾಗಿತ್ತು. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಧರಿಸಿದ್ದ ‘ಕೇಸರಿ’ ಬಣ್ಣದ ಉಡುಗೆಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಪಠಾಣ್ ಜನವರಿ 25, 2023 ರಂದು ತೆರೆಗೆ ಬರಲಿದೆ.

ಬಾಲಿವುಡ್‌ನ ನಟ, ನಟಿಯರನ್ನು ಮಿಶ್ರಾ ಟೀಕೆ ಮಾಡಿರುವುದು ಇದು ಮೊದಲೇನೂ ಅಲ್ಲ. ಅಕ್ಟೋಬರ್‌ನಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ’ ನಿರ್ಮಾಪಕರಿಗೆ ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು “ತಪ್ಪು” ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಿಶ್ರಾ ಎಚ್ಚರಿಸಿದ್ದರು.

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಇದಲ್ಲದೆ, ಈ ವರ್ಷದ ಜುಲೈನಲ್ಲಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ ಚಿತ್ರದ ವಿವಾದಾತ್ಮಕ ಪೋಸ್ಟರ್‌ನಲ್ಲಿ ದೇವಿ ಸಿಗರೇಟ್ ಸೇದುತ್ತಿರುವಂತೆ ತೋರಿಸಿದ್ದಕ್ಕೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ