AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ

Pathaan ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಉಡುಗೆಯನ್ನು"ಅತ್ಯಂತ ಆಕ್ಷೇಪಾರ್ಹ" ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು "ಕೊಳಕು ಮನಸ್ಥಿತಿ" ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.

ಪಠಾಣ್ ಚಿತ್ರದಲ್ಲಿ ದೀಪಿಕಾ ಉಡುಗೆಗೆ ಆಕ್ಷೇಪ, ಸಿನಿಮಾ ಬಿಡುಗಡೆಯಾಗದಂತೆ ತಡೆಯುತ್ತೇನೆ ಎಂದು ಬೆದರಿಕೆಯೊಡ್ಡಿದ ಸಚಿವ
ನರೋತ್ತಮ್ ಮಿಶ್ರಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 14, 2022 | 8:11 PM

Share

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿರುವ ಬಾಲಿವುಡ್ ಚಿತ್ರ ‘ಪಠಾಣ್’ ಚಿತ್ರದಲ್ಲಿನ (Pathaan) ಕೆಲವು ದೃಶ್ಯಗಳನ್ನು ಸರಿಪಡಿಸದಿದ್ದರೆ ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ತಡೆಯುವುದಾಗಿ ಬುಧವಾರ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪಠಾಣ್  ಚಿತ್ರದ ‘ಬೇಷರಂ ರಂಗ್’ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಅವರ ಉಡುಗೆಯನ್ನು”ಅತ್ಯಂತ ಆಕ್ಷೇಪಾರ್ಹ” ಎಂದು ಕರೆದ ಬಿಜೆಪಿ ನಾಯಕ, ದೃಶ್ಯಗಳನ್ನು “ಕೊಳಕು ಮನಸ್ಥಿತಿ” ಯಿಂದ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟ ಎಂದಿದ್ದಾರೆ.ಮಧ್ಯಪ್ರದೇಶ ರಾಜ್ಯ ಸರ್ಕಾರದ ವಕ್ತಾರರಾಗಿರುವ ಮಿಶ್ರಾ, ದೀಪಿಕಾ ಜೆಎನ್‌ಯು ಪ್ರಕರಣದಲ್ಲಿ ಟುಕ್ಡೆ ಟುಕ್ಡೆ ಗ್ಯಾಂಗ್‌ನ ಬೆಂಬಲಿಗರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 2016ರ ಪ್ರತಿಭಟನೆಯ ನಂತರ ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದನ್ನು ಉಲ್ಲೇಖಿಸಿ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ. ಜೆಎನ್‌ಯುಗೆ ದೀಪಿಕಾ ಭೇಟಿ ನೀಡಿದ್ದು ಆ ಹೊತ್ತಲ್ಲಿ ವಿವಾದವಾಗಿತ್ತು. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಧರಿಸಿದ್ದ ‘ಕೇಸರಿ’ ಬಣ್ಣದ ಉಡುಗೆಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಪಠಾಣ್ ಜನವರಿ 25, 2023 ರಂದು ತೆರೆಗೆ ಬರಲಿದೆ.

ಬಾಲಿವುಡ್‌ನ ನಟ, ನಟಿಯರನ್ನು ಮಿಶ್ರಾ ಟೀಕೆ ಮಾಡಿರುವುದು ಇದು ಮೊದಲೇನೂ ಅಲ್ಲ. ಅಕ್ಟೋಬರ್‌ನಲ್ಲಿ ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಬಾಲಿವುಡ್ ಚಲನಚಿತ್ರ ‘ಆದಿಪುರುಷ’ ನಿರ್ಮಾಪಕರಿಗೆ ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು “ತಪ್ಪು” ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಿಶ್ರಾ ಎಚ್ಚರಿಸಿದ್ದರು.

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಇದಲ್ಲದೆ, ಈ ವರ್ಷದ ಜುಲೈನಲ್ಲಿ ಲೀನಾ ಮಣಿಮೇಕಲೈ ಅವರ ಸಾಕ್ಷ್ಯಚಿತ್ರ ‘ಕಾಳಿ’ ಚಿತ್ರದ ವಿವಾದಾತ್ಮಕ ಪೋಸ್ಟರ್‌ನಲ್ಲಿ ದೇವಿ ಸಿಗರೇಟ್ ಸೇದುತ್ತಿರುವಂತೆ ತೋರಿಸಿದ್ದಕ್ಕೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ