AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬ್ಯೂರ್ಟಿಪಾರ್ಲರ್​ ಬಳಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆಕೆ ಬೇರೊಬ್ಬನ ಜತೆ ವಿವಾಹಕ್ಕೆ ಮುಂದಾಗಿದ್ದಾಳೆನ್ನುವ ಕೋಪದಲ್ಲಿ ಆತ ದುಡುಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ ಉತ್ತರ ಪ್ರದೇಶದ ಝಾನ್ಸಿಯವನು, ಇಬ್ಬರೂ ಮೊದಲು ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಸಾವು
ನಯನಾ ರಾಜೀವ್
|

Updated on:Jun 27, 2024 | 8:44 AM

Share

ಮದುವೆ ದಿನ ಬ್ಯೂಟಿ ಪಾರ್ಲರ್​ ಎದುರು ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಮೊರೆನಾ ಪ್ರದೇಶದಲ್ಲಿರುವ ಬ್ಯೂಟಿ ಪಾರ್ಲರ್​ ಎದುರು ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ನಂತರ ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯುವಕನನ್ನು ಉತ್ತರ ಪ್ರದೇಶದ ಝಾನ್ಸಿಯ ದೀಪಕ್ ಗೌತಮ್ ಎಂದು ಗುರುತಿಸಲಾಗಿದೆ. ಜೂನ್ 23 ರಂದು ಮದುವೆಗೆ ಕೆಲವು ಗಂಟೆಗಳ ಮೊದಲು ಮಧ್ಯಪ್ರದೇಶದ ಧಾತಿಯಾ ಜಿಲ್ಲೆಯ ಬರ್ಗಯಾನ್ ಗ್ರಾಮದ ನಿವಾಸಿ ಕಾಜಲ್ ಬ್ಯೂಟಿ ಪಾರ್ಲರ್​ಗೆ ಹೋಗಿದ್ದರು, ಆಗ ದೀಪಕ್ ಅಲ್ಲಿಗೆ ಹೋಗಿ ತನ್ನ ಜತೆ ಬರುವಂತೆ ಕೇಳಿದ್ದಾನೆ ಆಕೆ ಒಪ್ಪದ ಕಾರಣ ಗುಂಡಿ ಹತ್ಯೆ ಮಾಡಿದ್ದ.

ಆರೋಪಿ ಪತ್ತೆಗೆ ಝಾನ್ಸಿಯ ಸ್ವಾಟ್ ಸೇರಿದಂತೆ ಐದು ಪೊಲೀಸ್ ತಂಡಗಳು ಶೋಧ ಕಾರ್ಯ ಆರಂಭಿಸಿತ್ತು.ಸಾಮಾಜಿಕ ಜಾಲತಾಣಗಳಲ್ಲೂ ಆರೋಪಿಯ ಬಗ್ಗೆ ಸುದ್ದಿ ಹಬ್ಬಿತ್ತು.

ಅವರಿಬ್ಬರು ಪರಸ್ಪ ಪ್ರೀತಿಸುತ್ತಿದ್ದರು, ಒಮ್ಮೆ ಓಡಿ ಹೋಗಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಸ್ವಲ್ಪ ದಿನಗಳ ಬಳಿಕ ವಾಪಸ್ ಬಂದ ಆಕೆ ಪೋಷಕರ ಬಳಿ ನೀವು ಹೇಳಿದ ಹುಡುಗನನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದಳು.

ಮತ್ತಷ್ಟು ಓದಿ: ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ

ಆದರೆ ದೀಪಕ್ ಮಾತ್ರ ಆಕೆಯನ್ನು ಮರೆಯಲು ಸಿದ್ಧನಿರಲಿಲ್ಲ, ಆಕೆ ತನಗೆ ಸಿಗಲಿಲ್ಲ ಎಂದರೆ ಯಾರಿಗೂ ಸಿಗಬಾರದು ಎನ್ನುವ ಕೋಪದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ, ಬಳಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:43 am, Thu, 27 June 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ