AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬ್ಯೂರ್ಟಿಪಾರ್ಲರ್​ ಬಳಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆಕೆ ಬೇರೊಬ್ಬನ ಜತೆ ವಿವಾಹಕ್ಕೆ ಮುಂದಾಗಿದ್ದಾಳೆನ್ನುವ ಕೋಪದಲ್ಲಿ ಆತ ದುಡುಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ ಉತ್ತರ ಪ್ರದೇಶದ ಝಾನ್ಸಿಯವನು, ಇಬ್ಬರೂ ಮೊದಲು ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಸಾವು
ನಯನಾ ರಾಜೀವ್
|

Updated on:Jun 27, 2024 | 8:44 AM

Share

ಮದುವೆ ದಿನ ಬ್ಯೂಟಿ ಪಾರ್ಲರ್​ ಎದುರು ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಮೊರೆನಾ ಪ್ರದೇಶದಲ್ಲಿರುವ ಬ್ಯೂಟಿ ಪಾರ್ಲರ್​ ಎದುರು ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ನಂತರ ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯುವಕನನ್ನು ಉತ್ತರ ಪ್ರದೇಶದ ಝಾನ್ಸಿಯ ದೀಪಕ್ ಗೌತಮ್ ಎಂದು ಗುರುತಿಸಲಾಗಿದೆ. ಜೂನ್ 23 ರಂದು ಮದುವೆಗೆ ಕೆಲವು ಗಂಟೆಗಳ ಮೊದಲು ಮಧ್ಯಪ್ರದೇಶದ ಧಾತಿಯಾ ಜಿಲ್ಲೆಯ ಬರ್ಗಯಾನ್ ಗ್ರಾಮದ ನಿವಾಸಿ ಕಾಜಲ್ ಬ್ಯೂಟಿ ಪಾರ್ಲರ್​ಗೆ ಹೋಗಿದ್ದರು, ಆಗ ದೀಪಕ್ ಅಲ್ಲಿಗೆ ಹೋಗಿ ತನ್ನ ಜತೆ ಬರುವಂತೆ ಕೇಳಿದ್ದಾನೆ ಆಕೆ ಒಪ್ಪದ ಕಾರಣ ಗುಂಡಿ ಹತ್ಯೆ ಮಾಡಿದ್ದ.

ಆರೋಪಿ ಪತ್ತೆಗೆ ಝಾನ್ಸಿಯ ಸ್ವಾಟ್ ಸೇರಿದಂತೆ ಐದು ಪೊಲೀಸ್ ತಂಡಗಳು ಶೋಧ ಕಾರ್ಯ ಆರಂಭಿಸಿತ್ತು.ಸಾಮಾಜಿಕ ಜಾಲತಾಣಗಳಲ್ಲೂ ಆರೋಪಿಯ ಬಗ್ಗೆ ಸುದ್ದಿ ಹಬ್ಬಿತ್ತು.

ಅವರಿಬ್ಬರು ಪರಸ್ಪ ಪ್ರೀತಿಸುತ್ತಿದ್ದರು, ಒಮ್ಮೆ ಓಡಿ ಹೋಗಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಸ್ವಲ್ಪ ದಿನಗಳ ಬಳಿಕ ವಾಪಸ್ ಬಂದ ಆಕೆ ಪೋಷಕರ ಬಳಿ ನೀವು ಹೇಳಿದ ಹುಡುಗನನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದಳು.

ಮತ್ತಷ್ಟು ಓದಿ: ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ

ಆದರೆ ದೀಪಕ್ ಮಾತ್ರ ಆಕೆಯನ್ನು ಮರೆಯಲು ಸಿದ್ಧನಿರಲಿಲ್ಲ, ಆಕೆ ತನಗೆ ಸಿಗಲಿಲ್ಲ ಎಂದರೆ ಯಾರಿಗೂ ಸಿಗಬಾರದು ಎನ್ನುವ ಕೋಪದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ, ಬಳಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:43 am, Thu, 27 June 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ