ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬ್ಯೂರ್ಟಿಪಾರ್ಲರ್​ ಬಳಿ ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆಕೆ ಬೇರೊಬ್ಬನ ಜತೆ ವಿವಾಹಕ್ಕೆ ಮುಂದಾಗಿದ್ದಾಳೆನ್ನುವ ಕೋಪದಲ್ಲಿ ಆತ ದುಡುಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ ಉತ್ತರ ಪ್ರದೇಶದ ಝಾನ್ಸಿಯವನು, ಇಬ್ಬರೂ ಮೊದಲು ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಸಾವು
Follow us
|

Updated on:Jun 27, 2024 | 8:44 AM

ಮದುವೆ ದಿನ ಬ್ಯೂಟಿ ಪಾರ್ಲರ್​ ಎದುರು ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಮೊರೆನಾ ಪ್ರದೇಶದಲ್ಲಿರುವ ಬ್ಯೂಟಿ ಪಾರ್ಲರ್​ ಎದುರು ಯುವತಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ನಂತರ ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯುವಕನನ್ನು ಉತ್ತರ ಪ್ರದೇಶದ ಝಾನ್ಸಿಯ ದೀಪಕ್ ಗೌತಮ್ ಎಂದು ಗುರುತಿಸಲಾಗಿದೆ. ಜೂನ್ 23 ರಂದು ಮದುವೆಗೆ ಕೆಲವು ಗಂಟೆಗಳ ಮೊದಲು ಮಧ್ಯಪ್ರದೇಶದ ಧಾತಿಯಾ ಜಿಲ್ಲೆಯ ಬರ್ಗಯಾನ್ ಗ್ರಾಮದ ನಿವಾಸಿ ಕಾಜಲ್ ಬ್ಯೂಟಿ ಪಾರ್ಲರ್​ಗೆ ಹೋಗಿದ್ದರು, ಆಗ ದೀಪಕ್ ಅಲ್ಲಿಗೆ ಹೋಗಿ ತನ್ನ ಜತೆ ಬರುವಂತೆ ಕೇಳಿದ್ದಾನೆ ಆಕೆ ಒಪ್ಪದ ಕಾರಣ ಗುಂಡಿ ಹತ್ಯೆ ಮಾಡಿದ್ದ.

ಆರೋಪಿ ಪತ್ತೆಗೆ ಝಾನ್ಸಿಯ ಸ್ವಾಟ್ ಸೇರಿದಂತೆ ಐದು ಪೊಲೀಸ್ ತಂಡಗಳು ಶೋಧ ಕಾರ್ಯ ಆರಂಭಿಸಿತ್ತು.ಸಾಮಾಜಿಕ ಜಾಲತಾಣಗಳಲ್ಲೂ ಆರೋಪಿಯ ಬಗ್ಗೆ ಸುದ್ದಿ ಹಬ್ಬಿತ್ತು.

ಅವರಿಬ್ಬರು ಪರಸ್ಪ ಪ್ರೀತಿಸುತ್ತಿದ್ದರು, ಒಮ್ಮೆ ಓಡಿ ಹೋಗಿದ್ದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಸ್ವಲ್ಪ ದಿನಗಳ ಬಳಿಕ ವಾಪಸ್ ಬಂದ ಆಕೆ ಪೋಷಕರ ಬಳಿ ನೀವು ಹೇಳಿದ ಹುಡುಗನನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದಳು.

ಮತ್ತಷ್ಟು ಓದಿ: ಮದುವೆ ದಿನ ಬ್ಯೂಟಿ ಪಾರ್ಲರ್​ಗೆ ಬಂದಿದ್ದ ಯುವತಿಗೆ ಗುಂಡು ಹಾರಿಸಿ ಹತ್ಯೆಗೈದ ಮಾಜಿ ಪ್ರಿಯಕರ

ಆದರೆ ದೀಪಕ್ ಮಾತ್ರ ಆಕೆಯನ್ನು ಮರೆಯಲು ಸಿದ್ಧನಿರಲಿಲ್ಲ, ಆಕೆ ತನಗೆ ಸಿಗಲಿಲ್ಲ ಎಂದರೆ ಯಾರಿಗೂ ಸಿಗಬಾರದು ಎನ್ನುವ ಕೋಪದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ, ಬಳಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:43 am, Thu, 27 June 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ