AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಗಂಡ ಹೆಂಡತಿ ಜಗಳ ನಡುವೆ ಹೆಂಡತಿಯ ಮೂಗು ಕಚ್ಚಿ ಓಡಿದ ಗಂಡ, ಪ್ರಕರಣ ದಾಖಲು

Madhya Pradesh: ದಿನೇಶ್ ಇತ್ತೀಚೆಗೆ ಟೀನಾಳ ಪೋಷಕರ ಮನೆಗೆ ಭೇಟಿ ನೀಡಿ ನಿರ್ವಹಣೆ ವಿಷಯದ ಬಗ್ಗೆ ಚರ್ಚಿಸಿದರು, ಮತ್ತು ಗಂಡ ಮತ್ತು ಹೆಂಡತಿ ನಡುವೆ ತೀವ್ರ ವಾಗ್ವಾದ ನಡೆಯಿತು. ಕೋಪಗೊಂಡ ದಿನೇಶ್ ತನ್ನ ಪುತ್ರಿಯರ ಮುಂದೆ ಟೀನಾ ಮೇಲೆ ಹಲ್ಲೆ ಮಾಡಿದನು ಮತ್ತು ಆಕೆಯ ಮೂಗನ್ನು ಕಚ್ಚಿದ್ದಾನೆ

ಮಧ್ಯಪ್ರದೇಶ: ಗಂಡ ಹೆಂಡತಿ ಜಗಳ ನಡುವೆ ಹೆಂಡತಿಯ ಮೂಗು ಕಚ್ಚಿ ಓಡಿದ ಗಂಡ, ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 27, 2021 | 12:06 PM

Share

ರತ್ಲಾಮ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಗಂಡ ಹೆಂಡತಿಜಗಳ ಮಧ್ಯೆ ಕೋಪಗೊಂಡ ಗಂಡ ಹೆಂಡತಿ ಮೂಗು ಕಚ್ಚಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ಸಂತ್ರಸ್ತೆ ಟೀನಾಳ ಪತಿ ದಿನೇಶ್ ಮಾಲಿಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಅಲೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲೋಟೆ ಪೊಲೀಸ್ ಠಾಣೆಯ ಪ್ರಭಾರಿ ನೀರಜ್ ಸರ್ವಾನ್ ಪ್ರಕಾರ, ದಿನೇಶ್ ಮತ್ತು ಟೀನಾ 2008 ರಲ್ಲಿ ಉಜ್ಜಯಿನಿಯಲ್ಲಿ ಮದುವೆಯಾದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ತನ್ನ ಪತಿ ನಿರುದ್ಯೋಗಿ ಮತ್ತು ಮದ್ಯ ಸೇವಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮದುವೆಯಾದ ತಕ್ಷಣ ಟೀನಾ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದಳು. ಕಿರುಕುಳದಿಂದ ಬೇಸತ್ತು ಆಕೆ ತನ್ನ ಹೆಣ್ಣುಮಕ್ಕಳೊಂದಿಗೆ ತವರು ಮನೆಯಲ್ಲಿ ವಾಸವಾಗಿದ್ದು ಅಡುಗೆ ಕೆಲಸಕ್ಕೆ ಹೋಗಿ ಜೀವನ ಸಾಗಿಸುತ್ತಿದ್ದಳು. 2019 ರಲ್ಲಿ ಆಕೆ ತನ್ನ ಪತಿಯಿಂದ ಕುಟುಂಬ ನಿರ್ವಹಣೆಯ ವೆಚ್ಚಕ್ಕೆ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಳು.

ದಿನೇಶ್ ಇತ್ತೀಚೆಗೆ ಟೀನಾಳ ಪೋಷಕರ ಮನೆಗೆ ಭೇಟಿ ನೀಡಿ ನಿರ್ವಹಣೆ ವಿಷಯದ ಬಗ್ಗೆ ಚರ್ಚಿಸಿದರು, ಮತ್ತು ಗಂಡ ಮತ್ತು ಹೆಂಡತಿ ನಡುವೆ ತೀವ್ರ ವಾಗ್ವಾದ ನಡೆಯಿತು. ಕೋಪಗೊಂಡ ದಿನೇಶ್ ತನ್ನ ಪುತ್ರಿಯರ ಮುಂದೆ ಟೀನಾ ಮೇಲೆ ಹಲ್ಲೆ ಮಾಡಿದನು ಮತ್ತು ಆಕೆಯ ಮೂಗನ್ನು ಕಚ್ಚಿದ್ದಾನೆ. ಟೀನಾ ಮೂಗಿನಿಂದ ರಕ್ತಸ್ರಾವವಾಗುವುದನ್ನು ಗಮನಿಸಿದಾಗ ದಿನೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ.

ಟೀನಾ ಮತ್ತು ಆಕೆಯ ಹೆಣ್ಣು ಮಕ್ಕಳ ಕೂಗು ಕೇಳಿದ ನೆರೆಹೊರೆಯವರು ಸಹಾಯ ಮಾಡಲು ಬಂದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಅಲೋಟೆ ಪೊಲೀಸ್ ಠಾಣೆಯ ಪ್ರಭಾರಿ ನೀರಜ್ ಸರ್ವಾನ್ ತಿಳಿಸಿದ್ದಾರೆ.

ಇದನ್ನೂ ಓದಿDigital Health Mission Launch: ಆಯುಷ್ಮಾನ್​ ಆರೋಗ್ಯ ಡಿಜಿಟಲ್​ ಮಿಷನ್​ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇದನ್ನೂ ಓದಿ: ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿಗೆ ಆತಿಥ್ಯ ನೀಡಿದ್ದು ಕುಂದಾಪುರದ ಆನಂದ ಪೂಜಾರಿ!

(Madhya Pradesh husband bit off wife’s nose in a fit of rage over a domestic dispute)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ