AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ

ಮಲಗಿದ್ದ ಬಾಲಕಿಯನ್ನು ಸಂಬಂಧಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರಾತ್ರಿ, ಹುಡುಗಿಯ ಕುಟುಂಬ ನಿದ್ರಿಸುತ್ತಿದ್ದಾಗ, ಆರೋಪಿ ಅವಳನ್ನು ಮನೆಯಿಂದ ಅಪಹರಿಸಿ ಹತ್ತಿರದ ಇಂದಿರಾ ಸಾಗರ್ ಕಾಲುವೆಗೆ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಹುಡುಗಿ ಕಿರುಚಲು ಪ್ರಾರಂಭಿಸಿದಾಗ, ಬಂಧನಕ್ಕೆ ಹೆದರಿ ಆರೋಪಿಗಳು ಆಕೆಯನ್ನು ಕಾಲುವೆಗೆ ಎಸೆದಿದ್ದಾನೆ. ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ
ಕ್ರೈಂImage Credit source: Hindustan Times
ನಯನಾ ರಾಜೀವ್
|

Updated on: Jan 29, 2026 | 8:05 AM

Share

ಬರ್ವಾನಿ, ಜನವರಿ 29: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಏಳು ವರ್ಷದ ಬಾಲಕಿ(Girl)ಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ 17 ವರ್ಷದ ಅಪ್ರಾಪ್ತ ವಯಸ್ಸಿನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರಾತ್ರಿ, ಹುಡುಗಿಯ ಕುಟುಂಬ ನಿದ್ರಿಸುತ್ತಿದ್ದಾಗ, ಆರೋಪಿ ಅವಳನ್ನು ಮನೆಯಿಂದ ಅಪಹರಿಸಿ ಹತ್ತಿರದ ಇಂದಿರಾ ಸಾಗರ್ ಕಾಲುವೆಗೆ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಹುಡುಗಿ ಕಿರುಚಲು ಪ್ರಾರಂಭಿಸಿದಾಗ, ಬಂಧನಕ್ಕೆ ಹೆದರಿ ಆರೋಪಿಗಳು ಆಕೆಯನ್ನು ಕಾಲುವೆಗೆ ಎಸೆದಿದ್ದಾನೆ. ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ದಾವರ್ ಮಾತನಾಡಿ, ಸ್ಥಳೀಯ ನಿವಾಸಿಗಳ ವರದಿಯ ಮೇರೆಗೆ ಜನವರಿ 26 ರಂದು ಬಾಲಕಿಯ ಶವವನ್ನು ಕಾಲುವೆಯಿಂದ ಹೊರತೆಗೆಯಲಾಯಿತು. ವರದಿಯು ಬಾಲಕಿಯ ಖಾಸಗಿ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ಸಾವಿಗೆ ಕಾರಣ ಎಂದು ದೃಢಪಡಿಸಿದೆ.

17 ವರ್ಷದ ಸಂಬಂಧಿಯನ್ನು ಅನುಮಾನದ ಮೇಲೆ ಪ್ರಶ್ನಿಸಿದಾಗ, ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಬಂಧಿತ ಅಪ್ರಾಪ್ತ ವಯಸ್ಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಗರ್ಭಿಣಿ ಅಂತಾ ನೋಡದೆ ಸೊಸೆಯ ಕತ್ತು ಸೀಳಿ ಕೊಂದ ಮಾವ

ಮತ್ತೊಂದು ಘಟನೆ ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.

ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು