AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಭಾಗಶಃ ತಿಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಹುಲಿ ದಾಳಿ ಶಂಕೆ

ಮಧ್ಯಪ್ರದೇಶದ ಅರಣ್ಯ ಪ್ರದೇಶದಲ್ಲಿ ಭಾಗಶಃ ತಿಂದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಗುರುವಾರ 62 ವರ್ಷದ ವ್ಯಕ್ತಿಯೊಬ್ಬರ ದೇಹವನ್ನು ಭಾಗಶಃ ತಿಂದು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಧ್ಯಪ್ರದೇಶದಲ್ಲಿ ಭಾಗಶಃ ತಿಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಹುಲಿ ದಾಳಿ ಶಂಕೆ
ಸಾವುImage Credit source: iStock
ನಯನಾ ರಾಜೀವ್
|

Updated on: May 17, 2024 | 8:32 AM

Share

ಮಧ್ಯಪ್ರದೇಶದಲ್ಲಿ ಭಾಗಶಃ ತಿಂದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ದೇಹ ಪತ್ತೆಯಾಗಿದ್ದು, ಹುಲಿ ದಾಳಿ ಶಂಕೆ ವ್ಯಕ್ತಪಡಿಸಲಾಗಿದೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಗುರುವಾರ 62 ವರ್ಷದ ವ್ಯಕ್ತಿಯೊಬ್ಬರ ದೇಹವನ್ನು ಭಾಗಶಃ ತಿಂದು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನುಷ್ಯನನ್ನು ಹುಲಿ ಅಥವಾ ಚಿರತೆ ಕೊಂದಿದೆಯೇ ಎಂದು ಅರಣ್ಯ ಇಲಾಖೆ ಘೋಷಿಸದಿದ್ದರೂ, ಸ್ಥಳೀಯರು ಇದು ಹುಲಿ ದಾಳಿಯೇ ಇರಬೇಕು ಎಂದು ಅಂದಾಜಿಸುತ್ತಿದ್ದಾರೆ.

ಈ ಪ್ರದೇಶದಲ್ಲಿ ಹುಲಿಯು ಮನುಷ್ಯನನ್ನು ಭಾಗಶಃ ತಿಂದು ಹಾಕಿರುವ ಘಟನೆ ಇದೇ ಮೊದಲ ಬಾರಿಗೆ ವರದಿಯಾಗಿದೆ. ಮೃತವ್ಯಕ್ತಿಯನ್ನು ನೀಮ್‌ಖೇಡ ಗ್ರಾಮದ ನಿವಾಸಿ ಮಣಿರಾಮ್‌ ಜಾತವ್‌ ಎಂದು ಗುರುತಿಸಲಾಗಿದೆ ಕೆಲಸದ ನಿಮಿತ್ತ ಪಕ್ಕದ ಗ್ರಾಮಕ್ಕೆ ಹೋದಾಗ ಘಟನೆ ನಡೆದಿದೆ. ಮಧ್ಯಾಹ್ನದವರೆಗೂ ವಾಪಸ್ ಬಾರದೆ ಇದ್ದಾಗ ಮನೆಯವರು ಹುಡುಕಾಟ ನಡೆಸಿದ್ದಾರೆ.

ಮತ್ತಷ್ಟು ಓದಿ:ಹಾಸನದಲ್ಲಿ ಚಿರತೆ ದಾಳಿಗೆ ಹಸು ಬಲಿ, ಮೂರು ಹಸುಗಳಿಗೆ ಗಂಭೀರ ಗಾಯ, ಕೋಲಾರದಲ್ಲಿ ಕರು ತಿಂದ ಚಿರತೆ!

ಗುರುವಾರ ಸಂಜೆ ಅರಣ್ಯ ಪ್ರದೇಶದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಜಾತವ್ ಶವ ಪತ್ತೆಯಾಗಿದೆ. ತಜ್ಞರ ಪ್ರಕಾರ, ಅವರ ದೇಹದ ಮೇಲಿನ ಗಾಯಗಳು ಅವನನ್ನು ಹುಲಿ ಕೊಂದು ತಿಂದಿದೆ ಎಂದು ಸೂಚಿಸುತ್ತದೆ.

ಸ್ಥಳೀಯರ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ನೀಮಖೇಡ ಗ್ರಾಮದ ಸಮೀಪವಿರುವ ಕಾಡಿನಲ್ಲಿ ಕನಿಷ್ಠ ಎರಡು ಹುಲಿಗಳು ಸುತ್ತಾಡುತ್ತಿರುವುದನ್ನು ಅವರು ನೋಡಿದ್ದಾರೆ.

ಮುಂದಿನ ದಿನಗಳಲ್ಲಿ ಅರಣ್ಯಕ್ಕೆ ಹೋಗದಂತೆ ಸ್ಥಳೀಯರಿಗೆ ಎಚ್ಚರಿಕೆಯನ್ನೂ ನೀಡಲಾಯಿತು. ಮೃತರ ಸಂಬಂಧಿಕರಿಗೆ ಎಂಟು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಈ ಪ್ರದೇಶದಲ್ಲಿ ಕಳೆದ ಹಲವು ದಶಕಗಳಲ್ಲಿ ಹುಲಿ ಮನುಷ್ಯನನ್ನು ಕೊಂದಿರು ಘಟನೆ ವರದಿಯಾಗಿಲ್ಲ. ಆದಾಗ್ಯೂ, ಜನವರಿ 2021 ರಲ್ಲಿ, ಬುಧವಾರದ ಘಟನೆ ನಡೆದ ನೀಮ್ಖೇಡ ಗ್ರಾಮದಿಂದ ಸುಮಾರು 10 ಕಿಮೀ ದೂರದಲ್ಲಿರುವ ಗೋಪಿ ಸೂರ್ ಗ್ರಾಮದಲ್ಲಿ 12 ವರ್ಷದ ಬಾಲಕಿಯನ್ನು ಚಿರತೆ ಕೊಂದಿತ್ತು. ಬಾಲಕಿಯನ್ನು ಕೊಂದ ಚಿರತೆ ಆಕೆಯನ್ನು ತಿಂದಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್