AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ

ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ದೇಹವನ್ನು ಕತ್ತರಿಸಿ ಎರಡು ರೈಲುಗಳಲ್ಲಿ ಇರಿಸಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಗಳವಾಡಿ ಮನೆಬಿಟ್ಟು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಲ್ಲದೆ ಅತ್ಯಾಚಾರಕ್ಕೂ ಯತ್ನಿಸಿದ್ದ ಎನ್ನಲಾಗಿದೆ.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ
ರೈಲು
ನಯನಾ ರಾಜೀವ್
|

Updated on: Jun 24, 2024 | 12:23 PM

Share

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಎರಡು ರೈಲುಗಳಲ್ಲಿ ಭಾಗಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 60 ವರ್ಷದ ವ್ಯಕ್ತಿಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ.

ಜೂನ್​ 6 ರಂದು ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದಾಗ ಆರೋಪಿ ಕಮಲೇಶ್​ ಪಟೇಲ್ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಜೂನ್ 6ರಂದು ಪತಿಯೊಂದಿಗೆ ಜಗಳವಾಡಿದ ಬಳಿಕ ಮನೆ ಬಿಟ್ಟು ಬಂದಿದ್ದಳು, ಮಹಿಳೆ ಮಥುರಾಗೆ ಹೋಗಲು ಉಜ್ಜಯಿನಿ ನಿಲ್ದಾಣದಲ್ಲಿ ಕುಳಿತಿದ್ದಾಗ ಪಟೇಲ್ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದ ಬಳಿಕ ನಿದ್ರೆ ಮಾತ್ರೆ ಬೆರೆಸಿ ಆಹಾರವನ್ನು ಕೊಟ್ಟಿದ್ದ.

ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದ, ಆಕೆ ಕೂಡಲೇ ಎಚ್ಚರಗೊಂಡುಯ ಕಿರುಚಾಡಲು ಶುರು ಮಾಡಿದ್ದಳು. ಪಟೇಲ್ ಮೊದಲು ಕತ್ತು ಹಿಸುಕಿ ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಇಂದೋರ್​-ನಾಗ್ಡಾ ಮತ್ತು ಇಂದೋರ್ ಡೆಹ್ರಾಡೂನ್ ಪ್ಯಾಸೆಂಜರ್ ರೈಲುಗಳಲ್ಲಿ ಇರಿಸಿದ್ದ.

ಮತ್ತಷ್ಟು ಓದಿ: ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ

37 ವರ್ಷದ ಮಹಿಳೆಯ ಕೈಗಳು ಹಾಗೂ ಕಾಲುಗಳು ಜೂನ್ 10ರಂದು ಉತ್ತರಾಖಂಡದ ಋಷಿಕೇಶದ ರೈಲಿನಲ್ಲಿ ಪತ್ತೆಯಾಗಿದ್ದರೆ, ಉಳಿದ ದೇಹದ ಭಾಗಗಳು ಜೂನ್ 9ರಂದು ಇಂದೋರ್​ ರೈಲಿನಿಂದ ಹೊರತೆಗೆಯಲಾಯಿತು.

ಜೂನ್ 12ರಂದು ರತ್ಲಾಮ್ ಜಿಲ್ಲೆಯ ಬಿಲ್ಪಾಂಕ್ ಪೊಲೀಸ್ ಠಾಣೆಯಲ್ಲಿ ಆಕೆಯ ಸಂಬಂಧಿಕರು ಕಾಣೆಯಾದ ದೂರನ್ನು ದಾಖಲಿಸಿದ್ದರು. ಪಟೇಲ್​ನನ್ನು ಉಜ್ಜಿಯಿನಿಯಲ್ಲಿ ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ ಚಾಕುವನ್ನು ಇತರೆ ಸಾಕ್ಷ್ಯಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ