AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ

ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ದೇಹವನ್ನು ಕತ್ತರಿಸಿ ಎರಡು ರೈಲುಗಳಲ್ಲಿ ಇರಿಸಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಗಳವಾಡಿ ಮನೆಬಿಟ್ಟು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಲ್ಲದೆ ಅತ್ಯಾಚಾರಕ್ಕೂ ಯತ್ನಿಸಿದ್ದ ಎನ್ನಲಾಗಿದೆ.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ
ರೈಲು
ನಯನಾ ರಾಜೀವ್
|

Updated on: Jun 24, 2024 | 12:23 PM

Share

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಎರಡು ರೈಲುಗಳಲ್ಲಿ ಭಾಗಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 60 ವರ್ಷದ ವ್ಯಕ್ತಿಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ.

ಜೂನ್​ 6 ರಂದು ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದಾಗ ಆರೋಪಿ ಕಮಲೇಶ್​ ಪಟೇಲ್ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಜೂನ್ 6ರಂದು ಪತಿಯೊಂದಿಗೆ ಜಗಳವಾಡಿದ ಬಳಿಕ ಮನೆ ಬಿಟ್ಟು ಬಂದಿದ್ದಳು, ಮಹಿಳೆ ಮಥುರಾಗೆ ಹೋಗಲು ಉಜ್ಜಯಿನಿ ನಿಲ್ದಾಣದಲ್ಲಿ ಕುಳಿತಿದ್ದಾಗ ಪಟೇಲ್ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದ ಬಳಿಕ ನಿದ್ರೆ ಮಾತ್ರೆ ಬೆರೆಸಿ ಆಹಾರವನ್ನು ಕೊಟ್ಟಿದ್ದ.

ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದ, ಆಕೆ ಕೂಡಲೇ ಎಚ್ಚರಗೊಂಡುಯ ಕಿರುಚಾಡಲು ಶುರು ಮಾಡಿದ್ದಳು. ಪಟೇಲ್ ಮೊದಲು ಕತ್ತು ಹಿಸುಕಿ ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಇಂದೋರ್​-ನಾಗ್ಡಾ ಮತ್ತು ಇಂದೋರ್ ಡೆಹ್ರಾಡೂನ್ ಪ್ಯಾಸೆಂಜರ್ ರೈಲುಗಳಲ್ಲಿ ಇರಿಸಿದ್ದ.

ಮತ್ತಷ್ಟು ಓದಿ: ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ

37 ವರ್ಷದ ಮಹಿಳೆಯ ಕೈಗಳು ಹಾಗೂ ಕಾಲುಗಳು ಜೂನ್ 10ರಂದು ಉತ್ತರಾಖಂಡದ ಋಷಿಕೇಶದ ರೈಲಿನಲ್ಲಿ ಪತ್ತೆಯಾಗಿದ್ದರೆ, ಉಳಿದ ದೇಹದ ಭಾಗಗಳು ಜೂನ್ 9ರಂದು ಇಂದೋರ್​ ರೈಲಿನಿಂದ ಹೊರತೆಗೆಯಲಾಯಿತು.

ಜೂನ್ 12ರಂದು ರತ್ಲಾಮ್ ಜಿಲ್ಲೆಯ ಬಿಲ್ಪಾಂಕ್ ಪೊಲೀಸ್ ಠಾಣೆಯಲ್ಲಿ ಆಕೆಯ ಸಂಬಂಧಿಕರು ಕಾಣೆಯಾದ ದೂರನ್ನು ದಾಖಲಿಸಿದ್ದರು. ಪಟೇಲ್​ನನ್ನು ಉಜ್ಜಿಯಿನಿಯಲ್ಲಿ ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ ಚಾಕುವನ್ನು ಇತರೆ ಸಾಕ್ಷ್ಯಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?