AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ

ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ದೇಹವನ್ನು ಕತ್ತರಿಸಿ ಎರಡು ರೈಲುಗಳಲ್ಲಿ ಇರಿಸಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಗಳವಾಡಿ ಮನೆಬಿಟ್ಟು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಲ್ಲದೆ ಅತ್ಯಾಚಾರಕ್ಕೂ ಯತ್ನಿಸಿದ್ದ ಎನ್ನಲಾಗಿದೆ.

ಮಹಿಳೆಯ ಕೊಲೆ ಮಾಡಿ ಎರಡು ರೈಲುಗಳಲ್ಲಿ ದೇಹದ ತುಂಡರಿಸಿದ ಭಾಗಗಳನ್ನಿಟ್ಟಿದ್ದ ವ್ಯಕ್ತಿಯ ಬಂಧನ
ರೈಲು
ನಯನಾ ರಾಜೀವ್
|

Updated on: Jun 24, 2024 | 12:23 PM

Share

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಎರಡು ರೈಲುಗಳಲ್ಲಿ ಭಾಗಗಳನ್ನು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 60 ವರ್ಷದ ವ್ಯಕ್ತಿಯನ್ನು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಬಂಧಿಸಲಾಗಿದೆ.

ಜೂನ್​ 6 ರಂದು ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದಾಗ ಆರೋಪಿ ಕಮಲೇಶ್​ ಪಟೇಲ್ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಜೂನ್ 6ರಂದು ಪತಿಯೊಂದಿಗೆ ಜಗಳವಾಡಿದ ಬಳಿಕ ಮನೆ ಬಿಟ್ಟು ಬಂದಿದ್ದಳು, ಮಹಿಳೆ ಮಥುರಾಗೆ ಹೋಗಲು ಉಜ್ಜಯಿನಿ ನಿಲ್ದಾಣದಲ್ಲಿ ಕುಳಿತಿದ್ದಾಗ ಪಟೇಲ್ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದ ಬಳಿಕ ನಿದ್ರೆ ಮಾತ್ರೆ ಬೆರೆಸಿ ಆಹಾರವನ್ನು ಕೊಟ್ಟಿದ್ದ.

ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದ, ಆಕೆ ಕೂಡಲೇ ಎಚ್ಚರಗೊಂಡುಯ ಕಿರುಚಾಡಲು ಶುರು ಮಾಡಿದ್ದಳು. ಪಟೇಲ್ ಮೊದಲು ಕತ್ತು ಹಿಸುಕಿ ಕೊಲೆ ಮಾಡಿ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಇಂದೋರ್​-ನಾಗ್ಡಾ ಮತ್ತು ಇಂದೋರ್ ಡೆಹ್ರಾಡೂನ್ ಪ್ಯಾಸೆಂಜರ್ ರೈಲುಗಳಲ್ಲಿ ಇರಿಸಿದ್ದ.

ಮತ್ತಷ್ಟು ಓದಿ: ಇಂದೋರ್​-ಋಷಿಕೇಶ: ಎರಡು ರೈಲಿನೊಳಗೆ ಮಹಿಳೆಯ ದೇಹದ ತುಂಡರಿಸಿದ ಭಾಗಗಳು ಪತ್ತೆ

37 ವರ್ಷದ ಮಹಿಳೆಯ ಕೈಗಳು ಹಾಗೂ ಕಾಲುಗಳು ಜೂನ್ 10ರಂದು ಉತ್ತರಾಖಂಡದ ಋಷಿಕೇಶದ ರೈಲಿನಲ್ಲಿ ಪತ್ತೆಯಾಗಿದ್ದರೆ, ಉಳಿದ ದೇಹದ ಭಾಗಗಳು ಜೂನ್ 9ರಂದು ಇಂದೋರ್​ ರೈಲಿನಿಂದ ಹೊರತೆಗೆಯಲಾಯಿತು.

ಜೂನ್ 12ರಂದು ರತ್ಲಾಮ್ ಜಿಲ್ಲೆಯ ಬಿಲ್ಪಾಂಕ್ ಪೊಲೀಸ್ ಠಾಣೆಯಲ್ಲಿ ಆಕೆಯ ಸಂಬಂಧಿಕರು ಕಾಣೆಯಾದ ದೂರನ್ನು ದಾಖಲಿಸಿದ್ದರು. ಪಟೇಲ್​ನನ್ನು ಉಜ್ಜಿಯಿನಿಯಲ್ಲಿ ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ ಚಾಕುವನ್ನು ಇತರೆ ಸಾಕ್ಷ್ಯಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ